HEALTH TIPS

No title

                 ಲೈಂಗಿಕ ದೌರ್ಜನ್ಯದ ವಿರುದ್ದ ಜಾಗೃತಿ ಮೂಡಿಸಲು ವಿದ್ಯಾಥರ್ಿಯ ಕಾಶ್ಮೀರದಿಂದ ಕನ್ಯಾಕುಮಾರಿ ತನಕ ಸೈಕಲ್ ಯಾತ್ರೆ
    ಮಂಜೇಶ್ವರ: ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಸಮಾಜ ಶಾಸ್ತ್ರದಲ್ಲಿ ಸಂಶೋಧನಾ ವಿದ್ಯಾಥರ್ಿಯಾಗಿರುವ ಕೇರಳ ಮೂಲದ ಅಲ್ ಅಮೀನ್ ಎಂಬ ವಿದ್ಯಾಥರ್ಿ ಸಾರ್ವಜನಿಕರಿಗೆ ಹಾಗೂ ವಿದ್ಯಾಥರ್ಿಗಳಲ್ಲಿ ಲೈಂಗಿಕ ದೌರ್ಜನ್ಯದ ಬಗ್ಗೆ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಸೈಕಲ್ ಯಾತ್ರೆಯನ್ನು ಕೈಗೊಂಡಿದ್ದಾರೆ.
   ಈ ಸೈಕಲ್ ಯಾತ್ರೆ ಕೇರಳದ ಗಡಿಯನ್ನು ದಾಟುವ ಮಧ್ಯೆ ಶುಕ್ರವಾರ ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕಂದರಿ ಶಾಲೆಗೆ ಭೇಟಿ ನೀಡಿ ವಿದ್ಯಾಥರ್ಿಗಳಲ್ಲಿ ಜಾಗೃತಿಯನು ಮೂಡಿಸಿದ್ದಾರೆ.
   ವಿದ್ಯಾಥರ್ಿಗಳು ಸಾಮಾಜಿಕವಾಗಿ ಆತ್ಮಸ್ಥೈರ್ಯವನ್ನು ತುಂಬಿಸುವ ಕಾಯಕವನ್ನು ಬೆಳೆಸಿಕೊಳ್ಳಬೇಕು, ದೌರ್ಜನ್ಯಕ್ಕೆಡೆಯಾದರೆ ಅದನ್ನು ಮುಚ್ಚಿಟ್ಟು ಕೊಳ್ಳಬಾರದು. ಶಿಕ್ಷರಲ್ಲಿ ಅಥವಾ ಮನೆ ಮಂದಿಯಲ್ಲಿ ಗುಪ್ತವಾಗಿ ಮಾಹಿತಿಯನ್ನು ನೀಡಿ ಆರೋಪಿಗಳನ್ನು ಕಾನೂನಿನ ಮುಂದೆ ತರುವಂತಹ ಕೆಲಸಗಳನ್ನು ಮಾಡಬೇಕು ಎಂಬಿತ್ಯಾದಿ ಜಾಗೃತಿ ಸಲಹೆಗಳನ್ನು ನೀಡಿದರು.
   ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯ ಗೋಪಾಲ ಕೃಷ್ಣ ಭಟ್, ಶಾಲಾ ಸಂಚಾಲಕ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೊಡಿ, ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಪುಷ್ಪರಾಜ್ ಶೆಟ್ಟಿ, ಸಾವಿತ್ರಿ, ಶಿವಶಂಕರ್ ಭಟ್ ಮೊದಲಾದವರು ಉಪಸ್ಥಿತರಿದ್ದರು.
         

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries