HEALTH TIPS

ಪಟ್ಲ : ವಯನಾಟ್ಟು ಕುಲವನ್ ತೈಯ್ಯಂಕೆಟ್ಟು ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

    ಮಧೂರು: ಪಟ್ಲ ಭಂಡಾರವೀಡು ತರವಾಡು ವಯನಾಟ್ಟು ಕುಲವನ್ ತೈಯ್ಯಂಕೆಟ್ಟು ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರು ಬಿಡುಗಡೆಗೊಳಿಸಿದರು.
       ಉತ್ಸವ ಸಮಿತಿ ಅಧ್ಯಕ್ಷ ರಘುನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ವಿಶಿಷ್ಠ ಅತಿಥಿಯಾಗಿ ಭಾಗವಹಿಸಿದರು. ಮುಖ್ಯ ಅತಿಥಿಯಾಗಿ ಕಾಸರಗೋಡು ಸರ್ಕಲ್ ಇನ್ಸ್‍ಪೆಕ್ಟರ್ ಅಬ್ದುಲ್ ರಹಿಮಾನ್ ಭಾಗವಹಿಸಿದರು.
        ಮಧೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲತಿ ಸುರೇಶ್, ಬ್ಲಾಕ್ ಪಂಚಾಯತಿ ಸದಸ್ಯ ಪ್ರಭಾಶಂಕರ್ ಮಾಸ್ತರ್, ಪಟ್ಲ ವಾರ್ಡ್ ಸದಸ್ಯ ಎಂ.ಎ.ಮಜೀದ್, ಪಟ್ಲ ವಲಿಯ ಜುಮಾ ಮಸ್ಜಿದ್ ಅಧ್ಯಕ್ಷ ಪಿ.ಎ.ಅಬೂಬಕ್ಕರ್ ಹಾಜಿ, ಉತ್ತರ ಮಲಬಾರ್ ತೀಯ ಸಮುದಾಯ ಕ್ಷೇತ್ರ ಸಂರಕ್ಷಣೆ ಸಮಿತಿಯ ಕೇಂದ್ರ ಸಮಿತಿ ಕಾರ್ಯದರ್ಶಿ ನಾರಾಯಣನ್ ಚೂರಿಕೋಡ್, ಕಾಸರಗೋಡು ವಲಯ ಅಧ್ಯಕ್ಷ ರಾಮ ಮಾಸ್ತರ್ ಇಕ್ಕೇರಿ, ಪಟ್ಲ ಐವರ್ ಭಗವತಿ ಕ್ಷೇತ್ರ ಅಧ್ಯಕ್ಷ ರಾಘವ ಕಡಂಬಳ, ಕಾಸರಗೋಡು ಭಗವತಿ ಸೇವಾ ಸಂಘ ಅಧ್ಯಕ್ಷ  ಕೃಷ್ಣನ್ ಕೂಡ್ಲು, ಎರಿಯಾಕೋಟ ಭಗವತಿ ಕ್ಷೇತ್ರ ಅಧ್ಯಕ್ಷ ಪದ್ಮನಾಭನ್, ಮೋರ ಐವರ್ ಭಗವತಿ ಕ್ಷೇತ್ರ ಅಧ್ಯಕ್ಷ ನಾರಾಯಣನ್ ಮೊದಲಾದವರು ಶುಭಹಾರೈಸಿದರು.
ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಕುಮಾರನ್ ಕುದ್ರೆಪ್ಪಾಡಿ ಸ್ವಾಗತಿಸಿ, ಉತ್ಸವ ಸಮಿತಿಯ ಕಾರ್ಯಾಧ್ಯಕ್ಷ ಪ್ರಭಾಕರನ್ ಪಂಚಮಿ ವಂದಿಸಿದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries