ಕಾಸರಗೋಡು: ಜಿಲ್ಲೆಯಲ್ಲಿ ಕೋವಿಡ್-19 ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದನ್ನು ಮನಗಂಡು ಸರ್ಕಾರ ಜಿಲ್ಲೆಗೆ ವಿಶೇಷಾಧಿಕಾರಿಯನ್ನು ನೇಮಿಸಿದೆ. ಸರ್ಕಾರದ ಕಾರ್ಯದರ್ಶಿ ಅಲ್ಕೇಶ್ ಕುಮಾರ್ ಅವರನ್ನು ಕಾಸರಗೋಡಿಗೆ ಉಸ್ತುವಾರಿ ವಹಿಸಲು ನೇಮಿಸಲಾಗಿದೆ. ಇವರು ಜಿಲ್ಲಾಧಿಕಾರಿಗೆ ಸಲಹೆ ನೀಡಲಿದ್ದಾರೆ.
ಜಿಲ್ಲೆಯಲ್ಲಿ ದುಬೈ ಸಹಿತ ವಿದೇಶದಿಂದ ಆಗಮಿಸಿದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಬಹುತೇಕಮಂದಿಯಲ್ಲಿ ಸೋಂಕು ಕಂಡುಬಂದಿದೆ.ಜಿಲ್ಲಾಧಿಕಾರಿ, ಆರೋಗ್ಯ ಇಲಾಖೆ ಸಹಿತ ಹಲವಾರು ಮಂದಿ ಅಧಿಕಾರಿಗಳು ಸೋಂಕು ವ್ಯಾಪಿಸುತ್ತಿರುವುದನ್ನು ತಡೆಗಟ್ಟಲು ಹಗಲಿರುಳು ಶ್ರಮಿಸುತ್ತಿದ್ದರೂ, ನಿಯಂತ್ರಣಕ್ಕೆ ಸಿಗದ ರೀತಿಯಲ್ಲಿ ಹರಡುತ್ತಿರುವುದನ್ನು ಮನಗಂಡು ಸರ್ಕಾರ ವಿಶೇಷಾಧಿಕಾರಿಯನ್ನು ನೇಮಿಸಿದೆ.