HEALTH TIPS

ಲಾಕ್ ಡೌನ್ 5.0: ಅಂತರರಾಜ್ಯ, ಅಂತರ ಜಿಲ್ಲೆ ಪ್ರಯಾಣಕ್ಕೆ ನಿರ್ಬಂಧ ಇಲ್ಲ


    ನವದೆಹಲಿ: ಭಾರತ ದೇಶಾದ್ಯಂತ ಜೂನ್ 30ರ ವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಈ ಕುರಿತು ಶನಿವಾರ ಸಂಜೆ ಕೇಂದ್ರ ಗೃಹ ಸಚಿವಾಲಯದಿಂದ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಅಂತರ ಜಿಲ್ಲೆ ಮತ್ತು ಅಂತರ ರಾಜ್ಯ ಪ್ರಯಾಣಕ್ಕೆ ಮುಕ್ತ ಅವಕಾಶ ಕಲ್ಪಿಸಿದೆ.
       ಕೊರೊನಾ ವೈರಸ್ ಭೀತಿಯಲ್ಲಿ ಹಲವು ರಾಜ್ಯ ಸರ್ಕಾರಗಳು ಅಂತರರಾಜ್ಯ ಪ್ರಯಾಣ ಮತ್ತು ಅಂತರ ಜಿಲ್ಲೆಯ ಪ್ರಯಾಣವನ್ನು ನಿಷೇಧಿಸಿದೆ. ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಮುಕ್ತವಾಗಿ ಸಂಚರಿಸುವಂತಿರಲಿಲ್ಲ. ಪಾಸ್ ಇಲ್ಲದೆ, ಅನುಮತಿ ಇಲ್ಲದೇ ಸಂಚಾರ ಮಾಡುವಂತಿರಲಿಲ್ಲ.
         ಆದರೆ, ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಯಲ್ಲಿ ಅಂತರ ರಾಜ್ಯ ಪ್ರಯಾಣಕ್ಕೆ ಪಾಸ್ ಅಗತ್ಯ ಇಲ್ಲ ಎಂದು ತಿಳಿಸಿದೆ. ಇನ್ನು ಲಾಕ್ ಡೌನ್ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಪೂರ್ಣ ಪ್ರಮಾಣದ ಅಧಿಕಾರ ಇದೆ ಎಂದು ತಿಳಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವೂ ಅಂತರ್ ರಾಜ್ಯ ಪ್ರಯಾಣಕ್ಕೆ ಅಥವಾ ಬೇರೆ ರಾಜ್ಯದಿಂದ ಬರುವ ಜನರಿಗೆ ನಿಬರ್ಂಧ ಹೇರಿದರೆ ಅಚ್ಚರಿ ಇಲ್ಲ.
    ಕೇರಳ ಸರ್ಕಾರ ತನ್ನ ತೀರ್ಮಾನವನ್ನು ಇಂದು ತಿಳಿಸಲಿದೆ ಎಂದು ಅಂದಾಜಿಸಲಾಗಿದೆ.
       

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries