ಉಪ್ಪಳ: ಕೊರೊನಾ ಮಹಾಮಾರಿಯಿಂದ ತತ್ತರಿಸಿರುವ ಈ ಸಂದರ್ಭದಲ್ಲಿ ಗಾಯದ ಮೇಲೆ ಬರೆ ಎಳೆದಂತೆ ವಿದ್ಯುತ್ ದರವನ್ನು ಏರಿಸಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿರುವ ರಾಜ್ಯ ಸರ್ಕಾರದ ವಿರುದ್ದ ಕೇರಳದಾದ್ಯಂತ ವಿದ್ಯುತ್ ಕಛೇರಿಗಳ ಮುಂದೆ ಬಿಜೆಪಿ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಪೈವಳಿಕೆ ವಿದ್ಯುತ್ ಕಛೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯನ್ನು ಎಸ್ ಸಿ, ಎಸ್ ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಎ.ಕೆ.ಕಯ್ಯಾರ್ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತಿ ಸದಸ್ಯ ಪ್ರಸಾದ್ ರೈ ಕಯ್ಯಾರು ವಹಿಸಿದ್ದರು. ಕೃಷಿಕ ಮೋರ್ಚಾದ ಮಂಡಲ ಅಧ್ಯಕ್ಷ ಸದಾಶಿವ ಚೇರಾಲ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಹಾಗು ಕಾರ್ಯಕ್ರಮದಲ್ಲಿ ಬಿಜೆಪಿ ಪೈವಳಿಕೆ ಸಮಿತಿ ಅಧ್ಯಕ್ಷ ಲೋಕೇಶ್ ನೋಂಡ ಹಾಗು ಯುವಮೋರ್ಚ ಪ್ರಧಾನ ಕಾರ್ಯದರ್ಶಿ ಸಂತೋಷ್ ಆವಳ ಉಪಸ್ಥಿತರಿದ್ದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀಧರ ಬದಿಯಾರ್ ಸ್ವಾಗತಿಸಿ ಪಂಚಾಯತಿ ಸದಸ್ಯ ಸುಬ್ರಹ್ಮಣ್ಯ ಭಟ್ ಆಟಿಕುಕ್ಕೆ ವಂದಿಸಿದರು.