ನವದೆಹಲಿ: ಭಾರತ ಮತ್ತು ಚೀನಾ ಗಡಿ ವಿವಾದದ ಸಂಬಂಧ ಭಾರತ ಒಂದು ಇಂಚು ಭೂಮಿಯನ್ನೂ ಕಳೆದುಕೊಂಡಿಲ್ಲ, ಬಿಟ್ಟುಕೊಟ್ಟಿಲ್ಲ ಎಂದು ಸೇನಾ ಮುಖ್ಯಸ್ಥ ಎಂ.ಎಂ. ನರವಣೆ, ಹೇಳಿದ್ದಾರೆ.
ಈ ವಿವಾದ ಆರಂಭವಾಗುವಾಗ ಪರಿಸ್ಥಿತಿ ಹೇಗಿತ್ತೋ ಈಗಲೂ ಹಾಗೇ ಅದೆ ಸ್ಥಿತಿ ಇದೆ ನಮ್ಮ ಒಂದಿಂಚು ಭೂಮಿಯನ್ನು ನಾವು ಬಿಟ್ಟುಕೊಟ್ಟಿಲ್ಲ , ಕಳೆದುಕೊಂಡಿಲ್ಲ ಎಂದು ಹೇಳಿದರು.
ಡಾಖ್ನ ಪ್ಯಾಂಗಾಂಗ್ ಸರೋವರದಲ್ಲಿ ನಿಯೋಜಿಸಿದ್ದ ಸೇನೆಯನ್ನು ಕಳೆದ ತಿಂಗಳು ಭಾರತ ಹಾಗೂ ಚೀನಾ ವಾಪಸ್ ಕರೆದುಕೊಂಡಿತ್ತು. ಜೊತೆಗೆ ದೇಪ್ಸಾಂಗ್, ಹಾಟ್ ಸ್ಪ್ರಿಂಗ್ ಹಾಗೂ ಗೋಗ್ರಾದಲ್ಲಿಯೂ ಇದೇ ಬೆಳವಣಿಗೆ ನಿರೀಕ್ಷಿಸಲಾಗಿತ್ತು.
ಕಳೆದ ಏಪ್ರಿಲ್ನಲ್ಲಿ ಲಡಾಖ್ ಸಮೀಪ ಚೀನಾ ಸೇನೆ ಗಡಿ ನಿಯಂತ್ರಣ ರೇಖೆಯಿಂದ ಒಳನುಸುಳಿತ್ತು. ಕಳದೆ ಜೂನ್ 15ರಂದು ಈ ವಿವಾದದ ಸಂಬಂಧ ಜರುಗಿದ ಘರ್ಷಣೆಯಲ್ಲಿ 20 ಯೋಧರು ಹುತಾತ್ಮರಾಗಿದ್ದರು. ಭಾರತ ಮತ್ತು ಚೀನಾ ಗಡಿಯಲ್ಲಿ ಉಂಟಾಗಿದ್ದ ಬಿಕ್ಕಟ್ಟಿಗೆ ಸಂಬಂಧಪಟ್ಟಂತೆ ಉಭಯ ರಾಷ್ಟ್ರಗಳ ಸೇನೆ ಕಮಾಂಡರ್ಗಳ ನಡುವೆ ಹಲವು ಸುತ್ತಿನ ಮಾತಕತೆ ನಡೆದು ಬಳಿಕ, ಗಡಿಯಿಂದ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವ ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ.