HEALTH TIPS

ಕೇರಳ ಕೇಂದ್ರೀಯ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಾಹಿತ್ಯಯಾನದ ಆರನೇ ಉಪನ್ಯಾಸ ಕಾರ್ಯಕ್ರಮ ಇಂದು ಸಂಜೆ

          ಕಾಸರಗೋಡು: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯ, ಕಾಸರಗೋಡಿನ  ಕನ್ನಡ ವಿಭಾಗದ ಆಯೋಗದಲ್ಲಿ ಸರಣಿ ಉಪನ್ಯಾಸ ‘ಸಾಹಿತ್ಯಯಾನ’ ದ ಆರನೇ ಉಪನ್ಯಾಸ ಕಾರ್ಯಕ್ರಮವು ಇಂದು(ಜೂನ್ 30)ಸಂಜೆ 5 ಗಂಟೆಗೆ ಗೂಗಲ್ ಮೀಟ್ ಮೂಲಕ ನಡೆಯಲಿದೆ. ‘ಕಾವ್ಯದ ಓದು’ ಎಂಬ ವಿಷಯದಲ್ಲಿ ಕಾಸರಗೋಡು ಸರ್ಕಾರಿ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ರಾಧಾಕೃಷ್ಣ ಬೆಳ್ಳೂರು ಉಪನ್ಯಾಸ ನೀಡುವರು. ಕೇಂದ್ರೀಯ ವಿ.ವಿ ಇಂಗ್ಲೀಷ್ ಮತ್ತು ತೌಲನಿಕ ಸಾಹಿತ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಜೋಸೆಫ್ ಕೊಯಿಪ್ಪಳ್ಳಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಕನ್ನಡ ವಿಭಾಗದ ಪ್ರಭಾರ ಮುಖ್ಯಸ್ಥರಾದ ಡಾ. ಮೋಹನ್ ಎ.ಕೆ ಪ್ರಾಸ್ತಾವಿಕವಾಗಿ ಮಾತನಾಡುವರು. 

ಕನ್ನಡ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕಾರ್ಯಕ್ರಮ ಸಂಯೋಜಕ, ಅತಿಥಿ ಸಹಾಯಕ ಪ್ರಾಧ್ಯಾಪಕ ಮಹೇಶ್ ಎಂ ವಿನಂತಿಸಿಕೊಂಡಿದ್ದಾರೆ. ಗೂಗಲ್ ಮೀಟ್ ವಿಳಾಸ: https://meet.google.com/-mhp-yvqi-vba


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries