ಕಾಸರಗೋಡು: ನಗರಸಭೆ ಮತ್ತು ಪಂಚಾಯಿತಿ ತ್ಯಾಜ್ಯ ನಿರ್ವಹಣೆ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರ್ಚಂದ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲೆಯಲ್ಲಿ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿ ಮನೆ ಬಾಗಿಲಿಗೆ ಆಗಮಿಸಿ ತ್ಯಾಜ್ಯ ಸಂಗ್ರಹಿಸುವವರಿಗೆ ಪಾವತಿಸಬೇಕಾದ ಬಳಕೆದಾರರ ಶುಲ್ಕವಾಗಿ 100 ರೂ. ಮೊತ್ತವನ್ನು ಪಾವತಿಸದ 1144 ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಐಷಾರಾಮಿ ತೆರಿಗೆ ಪಾವತಿಸದ ಮನೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಭೆ ನಿರ್ಧರಿಸಿತು. ಜಿಲ್ಲೆಯ ಎಲ್ಲ ಸಂಸ್ಥೆಗಳೂ ಒಂದು ತಿಂಗಳೊಳಗೆ ಪರವಾನಿಗೆ ಪಡೆದುಕೊಳ್ಳದಿದ್ದಲ್ಲಿ ದಂಡ ಅಥವಾ ಕಾನೂನು ಕ್ರಮ ಜರುಗಿಸುವಂತೆ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚಿಸಿದರು. ಇಡಿಪಿ ಪ್ರಭಾರಿ ಕೆ.ವಿ.ಹರಿದಾಸ್, ಜಿಲ್ಲೆಯ ಎಲ್ಲಾ ಪಂಚಾಯತ್ ಕಾರ್ಯದರ್ಶಿಗಳು ಹಾಗೂ ನಗರಸಭೆ ಕಾರ್ಯದರ್ಶಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.