ಭೋಪಾಲ್/ಮುಂಬೈ : ಮಹಾರಾಷ್ಟ್ರ ಸಾರಿಗೆ ನಿಗಮಕ್ಕೆ ಸೇರಿದ (ಎಂಎಸ್ಆರ್ಟಿಸಿ) ಬಸ್ ಸೋಮವಾರ ಮಧ್ಯಪ್ರದೇಶದ ಧಾರ್ ಜಿಲ್ಲೆಯ ನರ್ಮದಾ ನದಿಗೆ ಉರುಳಿದ ಪರಿಣಾಮ ನಾಲ್ವರು ಮಹಿಳೆಯರು ಸೇರಿದಂತೆ 13 ಪ್ರಯಾಣಿಕರು ಮೃತಪಟ್ಟಿದ್ದಾರೆ. 15 ಜನರನ್ನು ರಕ್ಷಿಸಲಾಗಿದೆ.
ಭೋಪಾಲ್/ಮುಂಬೈ : ಮಹಾರಾಷ್ಟ್ರ ಸಾರಿಗೆ ನಿಗಮಕ್ಕೆ ಸೇರಿದ (ಎಂಎಸ್ಆರ್ಟಿಸಿ) ಬಸ್ ಸೋಮವಾರ ಮಧ್ಯಪ್ರದೇಶದ ಧಾರ್ ಜಿಲ್ಲೆಯ ನರ್ಮದಾ ನದಿಗೆ ಉರುಳಿದ ಪರಿಣಾಮ ನಾಲ್ವರು ಮಹಿಳೆಯರು ಸೇರಿದಂತೆ 13 ಪ್ರಯಾಣಿಕರು ಮೃತಪಟ್ಟಿದ್ದಾರೆ. 15 ಜನರನ್ನು ರಕ್ಷಿಸಲಾಗಿದೆ.
30ರಿಂದ 32 ಪ್ರಯಾಣಿಕರಿದ್ದ ಬಸ್ ಮಧ್ಯಪ್ರದೇಶದ ಇಂದೋರ್ನಿಂದ ಮಹಾರಾಷ್ಟ್ರದ ಅಮಲ್ನೇರ್ಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಚಾಲಕ, ನಿರ್ವಾಹಕ ಸೇರಿದಂತೆ 13 ಜನರ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ.
ಎಂಎಸ್ಆರ್ಟಿಸಿ ಅಧಿಕಾರಿಗಳ ಪ್ರಕಾರ, 'ಬಸ್ ಬೆಳಿಗ್ಗೆ 7.30ರ ಸುಮಾರಿಗೆ ಇಂದೋರ್ನಿಂದ ಹೊರಟು, ಜಲಗಾಂವ್ ಜಿಲ್ಲೆಯ ಅಮಲ್ನೇರ್ಗೆ ತೆರಳುತ್ತಿತ್ತು. ಬೆಳಿಗ್ಗೆ 10 ರಿಂದ 10.15 ರ ಸುಮಾರಿಗೆ ಕಾಲಾಘಾಟ್ ಮತ್ತು ತಿಗರಿ ನಡುವಿನ ಸೇತುವೆಯ ರೇಲಿಂಗ್ಗೆ ಅಪ್ಪಳಿಸಿ, ನದಿಗೆ ಬಿದ್ದಿದೆ. ಕ್ರೇನ್ ಬಳಸಿ, ನದಿಯಿಂದ ಬಸ್ ಹೊರ ತೆಗೆಯಲಾಗಿದ್ದು, ಹೆದ್ದಾರಿ ಸಂಚಾರ ವ್ಯವಸ್ಥೆ ಸಹಜ ಸ್ಥಿತಿಗೆ ಮರಳಿದೆ' ಎಂದು ತಿಳಿಸಿದ್ದಾರೆ.
ಬಸ್ 10 ವರ್ಷಕ್ಕಿಂತ ಹಳೆಯದಾಗಿದ್ದು, ಫಿಟ್ನೆಸ್ ಪ್ರಮಾಣಪತ್ರ ಈ ವರ್ಷ ಜುಲೈ 27ರಂದು ಮುಕ್ತಾಯಗೊಳ್ಳಲಿದೆ ಎಂದು ಮಹಾರಾಷ್ಟ್ರದ ಆರ್ಟಿಒ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಸೂಚನೆ ಮೇರೆಗೆ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮ (ಎಂಎಸ್ಆರ್ಟಿಸಿ) ಮೃತರ ಕುಟುಂಬದವರಿಗೆ ತಲಾ ₹ 10 ಲಕ್ಷ ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುವುದಾಗಿ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬದವರಿಗೆ ₹ 2 ಲಕ್ಷ ಹಾಗೂ ಗಾಯಾಳುಗಳಿಗೆ ₹ 50 ಸಾವಿರ ಪರಿಹಾರ ಘೋಷಿಸಿದ್ದಾರೆ.