HEALTH TIPS

ಗಡಿ ಬಿಕ್ಕಟ್ಟು: ಭಾರತ, ಚೀನಾ ಮಧ್ಯೆ 16ನೇ ಸುತ್ತಿನ ಮಾತುಕತೆ

            ನವದೆಹಲಿ: ಪೂರ್ವ ಲಡಾಖ್‌ನಲ್ಲಿ ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿಯ ಗಡಿ ಬಿಕ್ಕಟ್ಟನ್ನು ಬಗೆಹರಿಸುವ ನಿಟ್ಟಿನಲ್ಲಿ ಭಾರತ ಮತ್ತು ಚೀನಾ ಮಿಲಿಟರಿ ಕಮಾಂಡರ್‌ಗಳ ಮಟ್ಟದ ಮಾತುಕತೆ ಭಾನುವಾರ ನಡೆಯಿತು.

           ಭಾರತದ ಗಡಿಯಲ್ಲಿರುವ ಚುಶೂಲ್ ಠಾಣೆಯಲ್ಲಿ ನಡೆದ 16ನೇ ಸುತ್ತಿನ ಮಾತುಕತೆಯಲ್ಲಿ ಲೆಫ್ಟಿನೆಂಟ್ ಜನರಲ್ ಅನಿಂದ್ಯ ಸೇನ್‌ಗುಪ್ತ ನೇತೃತ್ವದ ಮಿಲಿಟರಿ ಅಧಿಕಾರಿಗಳ ನಿಯೋಗ ಪಾಲ್ಗೊಂಡಿತ್ತು.

                 ಚೀನಾ ಸೇನಾಧಿಕಾರಿಗಳ ನಿಯೋಗದ ನೇತೃತ್ವವನ್ನು ಮೇಜರ್‌ ಜನರಲ್ ಯಾಂಗ್‌ ಲಿನ್‌ ವಹಿಸಿದ್ದರು.

               ಸಂಘರ್ಷ ಏರ್ಪಟ್ಟ ಗಡಿ ಠಾಣೆಗಳಿಂದ ಯೋಧರನ್ನು ಸಂಪೂರ್ಣವಾಗಿ ಹಿಂದಕ್ಕೆ ಪಡೆಯಬೇಕು ಎಂಬ ತನ್ನ ವಾದವನ್ನು ಭಾರತ ಪುನರುಚ್ಚರಿಸಿತು ಎಂದು ಮೂಲಗಳು ಹೇಳಿವೆ. ಆದರೆ, ಮಾತುಕತೆ ಕುರಿತಂತೆ ಉಭಯ ದೇಶಗಳಿಂದ ಭಾನುವಾರ ತಡರಾತ್ರಿ ವರೆಗೂ ಅಧಿಕೃತ ಹೇಳಿಕೆ ಬಿಡುಗಡೆಯಾಗಿರಲಿಲ್ಲ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries