HEALTH TIPS

'ರಾಷ್ಟ್ರಪತ್ನಿ' ವಿವಾದ: ಸೋನಿಯಾ ವಿರುದ್ಧ ಟೀಕೆ: ಕಡತದಿಂದ ಕೈಬಿಡಲು ಆಗ್ರಹ

 

               ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕುರಿತು ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಪೀಯೂಷ್‌ ಗೋಯಲ್ ಅವರು ಆಡಿರುವ ಮಾತುಗಳನ್ನು ಕಡತದಿಂದ ತೆಗೆಯಬೇಕು ಎಂದು ಕೋರಿ ರಾಜ್ಯಸಭೆ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಭಾಪತಿ ಎಂ.ವೆಂಕಯ್ಯನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.

                 ಸದನದ ನಿಯಮ ಉಲ್ಲಂಘಿಸಿದ್ದಕ್ಕಾಗಿ ಇಬ್ಬರೂ ಸಚಿವರು ಕ್ಷಮೆ ಕೇಳಬೇಕು ಎಂದೂ ಖರ್ಗೆ ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ ನಾಯಕ ಅಧೀರ್ ರಂಜನ್‌ ಚೌಧರಿ ಅವರ 'ರಾಷ್ಟ್ರಪತ್ನಿ' ಹೇಳಿಕೆಗೆ ಸಂಬಂಧಿಸಿ ಇಬ್ಬರೂ ಸಚಿವರು ಸೋನಿಯಾ ವಿರುದ್ಧ ಹರಿಹಾಯ್ದಿದ್ದರು.

                  ನಿಯಮದ ಪ್ರಕಾರ, ಸದನದ ಸದಸ್ಯರಲ್ಲದ, ಅನ್ಯ ಸದನದ ಸದಸ್ಯರ ವಿರುದ್ಧ ಗಂಭೀರ ಹೇಳಿಕೆ ನೀಡುವಂತಿಲ್ಲ ಎಂದು ಹೇಳಿರುವ ಖರ್ಗೆ, ಪೂರಕವಾಗಿ ರಾಜ್ಯಸಭೆಯ ಮಾಜಿ ಸಭಾಪತಿ ಆರ್‌.ವೆಂಕಟರಾಮನ್‌ 1987ರಲ್ಲಿ ನೀಡಿದ್ದ ರೂಲಿಂಗ್‌ ಉಲ್ಲೇಖಿಸಿದ್ದಾರೆ. ಬೇರೊಂದು ಸದನದ ಸದಸ್ಯರ ವಿರುದ್ಧ ಹಕ್ಕುಚ್ಯುತಿ ಮಂಡಿಸುವ ಪ್ರಶ್ನೆಯೂ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries