ಸಮರಸ ಚಿತ್ರಸುದ್ದಿ: ಬದಿಯಡ್ಕ: ಕುಂಬ್ಡಾಜೆ ಕಜಮಲೆ ಸಾನ್ವಿ ಎಂಬ ಬಾಲಕಿಯ ಚಿಕಿತ್ಸೆಗೆ ಬದಿಯಡ್ಕ ಚಿನ್ಮಯ ವಿದ್ಯಾಲಯದ ಮುಖ್ಯೋಪಾಧ್ಯಾಯರು, ಅಧ್ಯಾಪಕರು, ಶಾಲೆಯ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಸಹಾಯಧನವನ್ನು ನೀಡಿದರು. ಸಾನ್ವಿ ವೈದ್ಯಕೀಯ ಸಮಿತಿಯ ಸಂಚಾಲಕ ರಾಜೇಶ್ ಮಾಸ್ತರ್ ಅಗಲ್ಪಾಡಿ ಹಾಗೂ ಹರಿನಾರಾಯಣ ಮಾಸ್ತರ್ ಸ್ವೀಕರಿಸಿದರು.