ಮಂಗಳೂರು: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಪುತ್ತೂರು ಭಾಗದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಈ ಪ್ರದೇಶದಲ್ಲಿ ಪೊಲೀಸ್ ಭದ್ರತೆಯನ್ನೂ ಹೆಚ್ಚಿಸಲಾಗಿದೆ. ಹತ್ಯೆ ಖಂಡಿಸಿ ಹಲವರು ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಘರ್ಷಣೆ ಸಾಧ್ಯತೆಯನ್ನು ಪರಿಗಣಿಸಿ ಆ ಪ್ರದೇಶದಲ್ಲಿ ಕರ್ಫ್ಯೂ ಘೋಷಿಸಲಾಗಿದೆ. ಬೆಳ್ಳಾರೆಯಲ್ಲಿ ನಿನ್ನೆ ಬೈಕ್ ನಲ್ಲಿ ಬಂದ ಅಪರಿಚಿತ ತಂಡವೊಂದು ಪ್ರವೀಣ್ ನನ್ನು ಕಡಿದು ಹತ್ಯೆ ಮಾಡಿತ್ತು.
ಘಟನೆಯ ನಂತರ ಬೆಳ್ಳಾರೆ ಗ್ರಾಮ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮಂಗಳೂರು, ಉಡುಪಿ ಮುಂತಾದ ಕಡೆಗಳಿಂದ ಹೆಚ್ಚಿನ ಪೊಲೀಸ್ ಪಡೆಗಳನ್ನು ಇಲ್ಲಿಗೆ ಕಳುಹಿಸಲಾಗಿದೆ. ಆದಷ್ಟು ಬೇಗ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪ್ರಕರಣದ ತನಿಖೆಗೆ ಪೊಲೀಸರ ಐದು ವಿಶೇಷ ತಂಡಗಳನ್ನು ನೇಮಿಸಲಾಗಿದೆ. ಈ ಪೈಕಿ ಮೂರು ತನಿಖಾ ತಂಡಗಳು ಕೇರಳಕ್ಕೆ ಬಂದು ತನಿಖೆ ನಡೆಸಲಿವೆ. ಒಂದು ತಂಡ ಮಡಿಕೇರಿಗೆ ಮತ್ತೊಂದು ತಂಡ ಹಾಸನಕ್ಕೆ ತೆರಳಿ ತನಿಖೆ ನಡೆಸಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.