ಪೆರ್ಲ: ಸ್ಥಳೀಯ ನಾಲಂದ ಮಹಾ ವಿದ್ಯಾಲಯದ ಹಳೇ ವಿದ್ಯಾರ್ಥಿನಿ, ಕಣ್ಣೂರು ವಿಶ್ವ ವಿದ್ಯಾಲಯದಿಂದ ಎರಡನೇ ರ್ಯಾಂಕ್ ಪಡೆದಿರುವ ಆಯಿಷತ್ತುಲ್ ಶಂಸೀರಾ ಅವರಿಗೆ ಅಭಿನಂದನಾ ಸಮಾರಂಭ ಕಾಲೇಜಿನಲ್ಲಿ ನಡೆಯಿತು. ಕಾಲೇಜಿನ ಆಟ್ರ್ಸ್, ಸಯನ್ಸ್, ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ಡಾ. ಜಯಗೋವಿಂದ ಉಕ್ಕಿನಡ್ಕ, ಪ್ರಾಂಶುಪಾಲ ಡಾ. ಕಿಶೋರ್ ಕುಮಾರ್ ರೈ ಶೇಣಿ, ಸಿಬ್ಬಂದಿ ಕಆರ್ಯದರ್ಶಿ ಶಂಕರ್ ಖಂಡಿಗೆ, ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ವಿಭಾಗ ಮುಖ್ಯಸ್ಥ ಶ್ರೀನಿಧಿ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕ ಸುರೇಶ್ ಸ್ವಾಗತಿಸಿದರು. ಸಹಾಯಕ ಪರಾಧ್ಯಾಪಕಿ ಅನುಷಾ ಸಿ.ಎಚ್. ಕಾರ್ಯಕ್ರಮ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕಿ ನಿವೇದಿತಾ ವಂದಿಸಿದರು.