HEALTH TIPS

ಗೋವಿಂದ ಪಾನ್ಸರೆ ಹತ್ಯೆ ಪ್ರಕರಣ ಎಟಿಎಸ್‌ಗೆ ವರ್ಗಾವಣೆ

 

                   ಮುಂಬೈ: ಹೋರಾಟಗಾರ ಗೋವಿಂದ ಪಾನ್ಸರೆ ಹತ್ಯೆ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರ ಸಿಐಡಿಯಿಂದ ಎಟಿಎಸ್‌ಗೆ ವರ್ಗಾವಣೆ ಮಾಡಲಾಗಿದೆ. ಈ ಸಂಬಂಧ ಬಾಂಬೆ ಹೈಕೋರ್ಟ್‌ ಬುಧವಾರ ಆದೇಶ ಹೊರಡಿಸಿದೆ.

                   ಮಹಾರಾಷ್ಟ್ರ ಸಿಐಡಿಯ ವಿಶೇಷ ತನಿಖಾ ತಂಡವು (ಎಸ್‌ಐಟಿ) ಈವರೆಗೂ ಪ್ರಕರಣದ ತನಿಖೆ ನಡೆಸುತ್ತಿತ್ತು.

                   'ತನಿಖೆಯ ಹೊಣೆಯನ್ನು ಸಿಐಡಿಯಿಂದ ಎಟಿಎಸ್‌ಗೆ ವರ್ಗಾಯಿಸುವಂತೆ ಪಾನ್ಸರೆ ಕುಟುಂಬದವರು ಮಾಡಿರುವ ಮನವಿಯನ್ನು ನಾವು ಪುರಸ್ಕರಿಸುತ್ತಿದ್ದೇವೆ' ಎಂದು ನ್ಯಾಯಮೂರ್ತಿ ರೇವತಿ ಮೋಹಿತೆ ಡೆರೆ ಹಾಗೂ ಶರ್ಮಿಳಾ ದೇಶಮುಖ್‌ ಅವರನ್ನೊಳಗೊಂಡ ವಿಭಾಗೀಯ ಪೀಠ ಬುಧವಾರ ತಿಳಿಸಿದೆ.

                   'ಎಟಿಎಸ್‌ ಕೂಡ ರಾಜ್ಯ ಸರ್ಕಾರದ ಅಧೀನಕ್ಕೊಳಪಟ್ಟಿರುವ ತನಿಖಾ ಸಂಸ್ಥೆ. ಪ್ರಕರಣದ ತನಿಖೆಯ ಹೊಣೆಯನ್ನು ಆ ಸಂಸ್ಥೆಗೆ ವರ್ಗಾಯಿಸಲು ನಮ್ಮದೇನೂ ತಕರಾರಿಲ್ಲ. ಎಸ್‌ಐಟಿಯ ಕೆಲ ಅಧಿಕಾರಿಗಳು ಎಟಿಎಸ್‌ ಜೊತೆ ಇದ್ದು ತನಿಖೆಗೆ ಅಗತ್ಯ ಸಹಕಾರ ನೀಡಲಿದ್ದಾರೆ' ಎಂದು ಎಸ್‌ಐಟಿ ಪರ ವಕೀಲ ಅಶೋಕ್‌ ಮುಂಡರಗಿ ನ್ಯಾಯಾಲಯಕ್ಕೆ ಹೇಳಿದರು.

                   'ಎಡಿಜಿಯವರು ಎಟಿಎಸ್‌ನ ಉನ್ನತ ಅಧಿಕಾರಿಯಾಗಿದ್ದು, ಅವರೇ ತನಿಖೆಯ ಮೇಲುಸ್ತುವಾರಿ ನೋಡಿಕೊಳ್ಳಲಿದ್ದಾರೆ' ಎಂದು ಮುಂಡರಗಿ ತಿಳಿಸಿದರು.

                '2015ರಿಂದಲೂ ಪ್ರಕರಣದ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ' ಎಂದು ಅಸಮಾಧಾನ ವ್ಯಕ್ತಪಡಿಸಿದ್ದ ಪಾನ್ಸರೆ ಅವರ ಸೊಸೆ ಮೇಘಾ ಪಾನ್ಸರೆ ಹೋದ ತಿಂಗಳು ನ್ಯಾಯಾಲಯಕ್ಕೆ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries