HEALTH TIPS

ಮಳೆ ಅನಾಹುತ: ರಕ್ಷಣಾ ಕಾರ್ಯಕ್ಕೆ ಬಿಜೆಪಿ ಕಾರ್ಯಕರ್ತರು ರಂಗಕ್ಕೆ: ಕೆ.ಸುರೇಂದ್ರನ್


                ತಿರುವನಂತಪುರ: ರಾಜ್ಯದಲ್ಲಿ ಮಳೆಯಿಂದ ಸಂತ್ರಸ್ತರಾಗಿರುವ ಜನರ ನೆರವಿಗೆ ಬಿಜೆಪಿ ಕಾರ್ಯಕರ್ತರು ಮುಂದೆ ಬರಲಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಘೋಷಿಸಿದ್ದಾರೆ.
                   ಎಲ್ಲಾ ಬಿಜೆಪಿ ಕಾರ್ಯಕರ್ತರು ಮಳೆ ಪೀಡಿತ ಪ್ರದೇಶಗಳಿಗೆ ತಲುಪಿ ಜನರಿಗೆ ಅಗತ್ಯ ನೆರವು ನೀಡುವಂತೆ ಕರೆ ನೀಡಿದರು.
                    ಪಕ್ಷದ ಸೇವಾ ಯೋಜನೆಯಾದ ತಾಮರತನಾಳದಡಿ ಬಿಜೆಪಿ ಕಾರ್ಯಕರ್ತರು ಸಂತ್ರಸ್ತರಿಗೆ ಅಗತ್ಯ ವಸ್ತುಗಳನ್ನು ತಲುಪಿಸಲಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಪಕ್ಷದ ಸಹಾಯ ಕೇಂದ್ರಗಳನ್ನು ಆರಂಭಿಸಲಾಗಿದೆ. ರಾಜ್ಯ ಮಟ್ಟದಲ್ಲೂ ಹೆಲ್ಪ್ ಡೆಸ್ಕ್ ಆರಂಭಿಸಲಾಗುವುದು ಎಂದು ಕೆ.ಸುರೇಂದ್ರನ್ ಮಾಹಿತಿ ನೀಡಿದರು.
            ಅತಿವೃಷ್ಟಿ ಹಾಗೂ ಜಲಾವೃತದಿಂದ ನರಳುತ್ತಿರುವ ಜನರನ್ನು ಕ್ಯಾಂಪ್ ಗಳಿಗೆ ಸ್ಥಳಾಂತರಿಸಲು ಮತ್ತು ಅಗತ್ಯ ವಸ್ತುಗಳನ್ನು ತಲುಪಿಸಲು ಬಿಜೆಪಿ ಕಾರ್ಯಕರ್ತರು ಯಾವಾಗಲೂ ಮುಂಚೂಣಿಯಲ್ಲಿರುತ್ತಾರೆ. ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವವರನ್ನು ಕೈಬಿಡುವುದಿಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷರು ಭರವಸೆ ನೀಡಿದ್ದಾರೆ.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries