ಕಾಸರಗೋಡು: ಜಿಲ್ಲೆಯ ನಾಣಾ ಕಡೆ ಶ್ರೀ ವರಮಹಾಲಕ್ಷ್ಮೀ ವರತಾಚರಣೆ ಭಕ್ತಿ ಸಡಗರದಿಂದ ಶುಕ್ರವಾರ ಆಚರಿಸಲಾಯಿತು. ಬಿರುಸಿನ ಮಳೆಯನ್ನೂ ಲೆಕ್ಕಿಸದೆ, ಮುತ್ತೈದೆಯರು ಮಹಾಲಕ್ಷ್ಮೀ ಆರಾಧನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಪೆರ್ಲ ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತೀ)ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ಉಳ್ಳಾಲ್ತಿ ಮಹಿಳಾ ಸಂಘದಿಂದ ನಡೆದ 14ನೇ ವರ್ಷದ ವರಮಹಾಲಕ್ಷ್ಮೀ ಪೂಜೆಯಲ್ಲಿ ಪುರೋಹಿತ ಶ್ರೀಧರ ಭಟ್ ಸಜಂಗದ್ದೆ ಪೂಜಾಕಾರ್ಯ ನೆರವೇರಿಸಿದರು.
ವರ್ಕಾಡಿಯ ಕಾವಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಕಾಸರಗೋಡು ಚೌಕಿ ಹರಿಜಾಲ್ ಶ್ರೀ ಮಹಾವಿಷ್ಣು ಮಹಿಳಾ ಸಂಘದ ವತಿಯಿಂದ ಕಲಶಪ್ರತಿಷ್ಠೆಯೊಂದಿಗೆ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು. ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ನೇತೃತ್ವ ವಹಿಸಿದ್ದರು. ವಿಶ್ವ ಹಿಂದೂ ಪರಿಷತ್ ಮಾತೃಮಂಡಳಿ ಮಂಜೇಶ್ವರ ಪ್ರಖಂಡ ವತಿಯಿಂದ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ಶ್ರೀವರಮಹಾಲಕ್ಷ್ಮೀ ಪೂಜೆ ನಡೆಯಿತು.
ಫೋಟೋ ಪೆರ್ಲ ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತೀ)ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು.