HEALTH TIPS

ದೇಶದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಓಮೈಕ್ರಾನ್ ಉಪ ತಳಿಗಳು ಕಾರಣ: ವರದಿ

 

             ನವದೆಹಲಿ: ದೇಶದಲ್ಲಿ ಕೋವಿಡ್-19 ಪ್ರಕರಣಗಳ ಹರಡುವಿಕೆಗೆ ಓಮೈಕ್ರಾನ್ ಹಾಗೂ ಅದರ ಉಪ ತಳಿಗಳು ಕಾರಣವಾಗುತ್ತಿವೆ ಎಂದು 'ಭಾರತೀಯ ಸಾರ್ಸ್-ಕೊವ್-2 ಜೀನೋಮಿಕ್ಸ್ ಒಕ್ಕೂಟ (ಐಎನ್‌ಎಸ್‌ಎಸಿಒಜಿ)' ವಾರದ ಸಭೆಯಲ್ಲಿ ಅಭಿಪ್ರಾಯಪಟ್ಟಿದೆ.

                ಕೊರೊನಾ ವೈರಸ್‌ನ ವಿವಿಧ ಉಪ ತಳಿಗಳ ಪರಾಮರ್ಶೆ ನಡೆಸಿದ ಬಳಿಕ ಒಕ್ಕೂಟವು ಈ ಅಭಿಪ್ರಾಯಕ್ಕೆ ಬಂದಿದೆ.

                 ಪ್ರಸ್ತುತ ಓಮೈಕ್ರಾನ್ ಮತ್ತು ಅದರ ಉಪ ತಳಿಗಳು ಮಾತ್ರ ದೇಶದಲ್ಲಿ ಹರಡುತ್ತಿವೆ ಎಂದು ಮೂಲಗಳನ್ನು ಉಲ್ಲೇಖಿಸಿ 'ಎಎನ್‌ಐ' ಸುದ್ದಿ ಸಂಸ್ಥೆ ವರದಿ ಮಾಡಿದೆ.


              'ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಮತ್ತು ಮರಣ ಪ್ರಮಾಣ ಕಡಿಮೆಯಾಗಿದೆ' ಎಂದು ಮೂಲಗಳು ಹೇಳಿವೆ.

                 'ನಾವು ಪ್ರತಿ ವಾರ ದತ್ತಾಂಶಗಳನ್ನು ಪರಿಶೀಲಿಸುತ್ತೇವೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಾಗಿಲ್ಲ. ಆತಂಕಪಡುವ ಅಗತ್ಯವಿಲ್ಲ' ಎಂದು ಐಎನ್‌ಎಸ್‌ಎಸಿಒಜಿ ಮೂಲಗಳು ಹೇಳಿವೆ.

                 ಓಮೈಕ್ರಾನ್‌ ಉಪ ತಳಿಗಳಿಗೆ ಸಂಬಂಧಿಸಿ ಐಎನ್‌ಎಸ್‌ಎಸಿಒಜಿ ಶೀಘ್ರದಲ್ಲೇ ಪ್ರಕಟಣೆ ಬಿಡುಗಡೆ ಮಾಡಲಿದೆ ಎಂದೂ ಮೂಲಗಳು ತಿಳಿಸಿವೆ.

            ಶನಿವಾರ ಬೆಳಗ್ಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 19,406 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 49 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಶುಕ್ರವಾರಕ್ಕೆ ಹೋಲಿಸಿದರೆ (20,551 ಹೊಸ ಪ್ರಕರಣ, 70 ಸಾವು) ಇದು ತುಸು ಕಡಿಮೆಯಾದರೂ ಕಳೆದ ಕೆಲವು ದಿನಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಸದ್ಯ ದೇಶದಲ್ಲಿ 1,34,793 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇಕಡ 4.96 ಆಗಿದೆ.

Image

 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries