ತಿರುವನಂತಪುರ: ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಉಂಟಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.
ಇದರ ಭಾಗವಾಗಿ ಮುಂದಿನ ದಿನಗಳಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ. ಭಾನುವಾರದ ವೇಳೆಗೆ ಕಡಿಮೆ ಒತ್ತಡ ರೂಪುಗೊಳ್ಳುವ ಮುನ್ಸೂಚನೆ ಇದೆ.
ಪ್ರಸ್ತುತ, ದಕ್ಷಿಣ ಆಂಧ್ರಪ್ರದೇಶ ಮತ್ತು ಉತ್ತರ ತಮಿಳುನಾಡಿನ ಬಳಿ ಮಧ್ಯ ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿ ಸೈಕ್ಲೋನಿಕ್ ಗೈರ್ ಇದೆ. ಇದು ಮುಂಬರುವ ಗಂಟೆಗಳಲ್ಲಿ ಬಲವನ್ನು ಪಡೆಯುತ್ತದೆ. ಉತ್ತರ ಕೇರಳ ಕರಾವಳಿಯಿಂದ ದಕ್ಷಿಣ ಗುಜರಾತ್ ಕರಾವಳಿಯವರೆಗೆ ಕಡಿಮೆ ಒತ್ತಡದ ಪ್ರದೇಶವೂ ಇದೆ. ಬರಿಯ ವಲಯ ಮತ್ತು ಅರೇಬಿಯನ್ ಸಮುದ್ರದ ಮೇಲೆ ಪಶ್ಚಿಮ ಮಾರುತಗಳು ಬಲಗೊಳ್ಳುತ್ತಿವೆ. ಇದೆಲ್ಲದರ ಪರಿಣಾಮವಾಗಿ ರಾಜ್ಯದಲ್ಲಿ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.
ಮುಂದಿನ ಸೋಮವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದಲ್ಲದೆ, ಬಲವಾದ ಗಾಳಿ ಸಹ ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆ ವಹಿಸುವಂತೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ.
ಕಡಿಮೆ ಒತ್ತಡದ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಹೋಗುವುದನ್ನು ನಿμÉೀಧಿಸಲಾಗಿದೆ. ಮುಂದಿನ ಸೂಚನೆ ಬರುವವರೆಗೂ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಸಾಧ್ಯತೆ; ಕೇರಳದಲ್ಲಿ ಸೋಮವಾರದವರೆಗೂ ಮಳೆ ಮುಂದುವರಿಕೆ: ಜಾಗರೂಕರಾಗಿರಲು ಸಲಹೆ
0
August 04, 2022
Tags