ಕಣ್ಣೂರು: ರಾಜ್ಯ ಕೃಷಿ ಕ್ಷೇತ್ರದಲ್ಲಿ ತೀವ್ರ ಬಿಕ್ಕಟ್ಟು ಎದುರಿಸುತ್ತಿದೆ ಎಂದು ರೈತ ಮೋರ್ಚಾ ಹೇಳಿದೆ. ಈ ಸಂದರ್ಭದಲ್ಲಿ ಕಣ್ಣೂರಿನಲ್ಲಿ ನಡೆದ ರೈತ ಮೋರ್ಚಾ ರಾಜ್ಯ ಸಮಿತಿ ಸಭೆಯು ಈ ಹಿಂದೆ ಆಡಳಿತ ನಡೆsಸಿದ್ದ ಪಕ್ಷಗಳ ವಿರುದ್ಧ ಹಾಗೂ ವಿಶೇಷವಾಗಿ ಈಗ ಅಧಿಕಾರದಲ್ಲಿರುವ ಎಡಪಕ್ಷಗಳ ವಿರುದ್ಧ ಚಾರ್ಜ್ ಶೀಟ್ ಸಿದ್ಧಪಡಿಸಲು ನಿರ್ಧರಿಸಿದೆ.
ಚಾರ್ಜ್ ಶೀಟ್ ಸಿದ್ಧಪಡಿಸುವ ಭಾಗವಾಗಿ ನವೆಂಬರ್ 15 ರಿಂದ ಸ್ಥಳೀಯ ಮಟ್ಟದಲ್ಲಿ ರೈತ ಸಮಾವೇಶಗಳನ್ನು ಆಯೋಜಿಸಲಾಗುವುದು. ಕೇರಳದ ಕೃಷಿ ಕ್ಷೇತ್ರದಲ್ಲಿ ಸಮಗ್ರ ಬದಲಾವಣೆಗಳನ್ನು ತರಲು ತಿರುವನಂತಪುರಂ, ಎರ್ನಾಕುಳಂ ಮತ್ತು ಕೋಝಿಕ್ಕೋಡ್ ಜಿಲ್ಲೆಗಳಲ್ಲಿ ಪ್ರಮುಖರ ಭಾಗವಹಿಸುವಿಕೆಯೊಂದಿಗೆ ಕೃಷಿ ವಿಚಾರ ಸಂಕಿರಣಗಳನ್ನು ಆಯೋಜಿಸಲು ಸಭೆ ನಿರ್ಧರಿಸಿತು.
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಅಂಗವಾಗಿ ಗಾಂಧಿ ಜಯಂತಿಯವರೆಗೆ ಸಾರ್ವಜನಿಕ ಸ್ಥಳಗಳ ಸ್ವಚ್ಛತೆ, ಗಿಡ ನೆಡುವುದು, ಮಳೆ ಬಾವಿ ನಿರ್ಮಾಣ, ಖಾದಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾರ್ಜ್ ಕುರಿಯನ್ ಶನಿವಾರ ರಾಜ್ಯಮಟ್ಟದ ಖಾದಿ ಅಭಿಯಾನವನ್ನು ಉದ್ಘಾಟಿಸಿದರು. ರೈತ ಮೋರ್ಚಾ ರಾಜ್ಯಾಧ್ಯಕ್ಷ ಶಾಜಿ ರಾಘವನ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಗಣೇಶನ್, ರೈತ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷ ನ್ಯಾಯವಾದಿ ಜಯಸೂರ್ಯನ್, ಬಿಜೆಪಿ ಕಣ್ಣೂರು ಜಿಲ್ಲಾಧ್ಯಕ್ಷ ಎನ್.ಹರಿದಾಸ್, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎ.ಪಿ.ಅಬ್ದುಲ್ಲಕುಟ್ಟಿ, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಿಘೋμï, ಕೆ.ಟಿ.ವಿಪಿನ್ ಉಪಸ್ಥಿತರಿದ್ದರು. ರಾಜ್ಯ ಕಾರ್ಯದರ್ಶಿ ಇ ಕೃಷ್ಣನ್ ಸ್ವಾಗತಿಸಿ, ಜಿಲ್ಲಾ ಕಾರ್ಯದರ್ಶಿ ಸುಧೀರ್ ಬಾಬು ವಂದಿಸಿದರು.
ಕೃಷಿ ಕ್ಷೇತ್ರದಲ್ಲಿ ರಾಜ್ಯ ಗಂಭೀರ ಬಿಕ್ಕಟ್ಟು ಎದುರಿಸುತ್ತಿದೆ’: ಸರ್ಕಾರದ ವಿರುದ್ಧ ಚಾರ್ಜ್ ಶೀಟ್ ಸಿದ್ಧಪಡಿಸಲು ರೈತ ಮೋರ್ಚಾದಿಂದ ತೀರ್ಮಾನ
0
September 18, 2022