HEALTH TIPS

ವಿದುಷಿ ಹರ್ಷಿತಾಳಿಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ


           ಬದಿಯಡ್ಕ: ಬೆಂಗಳೂರು ಆರ್ ಎನ್ ಎಸ್ ಪದವಿಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ನಡೆಯುವ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬದಿಯಡ್ಕ ಸಮೀಪದ ಕನಕಪ್ಪಾಡಿಯ ವಿದುಷಿ ಹರ್ಷಿತಾ ಎನ್. ಇವರಿಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ ನೀಡಲಾಗುವುದು. ನೂತನವಾಗಿ ನಿರ್ಮಾಣವಾಗಿರುವ ಡಾ.ಆರ್.ಎನ್.ಶೆಟ್ಟಿಯವರ ಕನಸಿನ ಕೂಸು ಸಭಾಂಗಣದಲ್ಲಿ ಸೆ.22ರಂದು ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ.
          ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ವಿ.ವಿ.ಉಪಕುಲಪತಿ ಡಾ. ಪಿಎಸ್ ಎಡಪಡಿತ್ತಾಯ, ಗೌರವಾನ್ವಿತ ಅತಿಥಿಗಳಾಗಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇದರ ಮಾಜಿ ಅಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಉಪಸ್ಥಿತರಿರುವರು. ಆರ್. ಎನ್. ಎಸ್. ಮುಖ್ಯ ಆಡಳಿತಾಕಾರಿ ಡಾ. ಸುಧೀರ್ ಪೈ ಕೆ.ಎಲ್. ಅಧ್ಯಕ್ಷತೆ ವಹಿಸಲಿದ್ದಾರೆ. ವಿದುಷಿ ಹರ್ಷಿತಾ ಇವರು ವಿದುಷಿ ಯೋಗೀಶ್ವರೀ ಜಯಪ್ರಕಾಶ್ ಪುತ್ತೂರು ಇವರ ಶಿಷ್ಯಯಾಗಿದ್ದಾರೆ. ಪ್ರಸ್ತುತ ಮಂಗಳೂರು ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ ಹೋಸ್ಪಿಟಲ್ ಎಡ್ಮಿನಿಸ್ಟ್ರೇಶನ್ ಕೋರ್ಸ್ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದಾರೆ. ಈಕೆ ಬದಿಯಡ್ಕ ಕನಕಪ್ಪಾಡಿಯ ಭಾಸ್ಕರ ಹಾಗೂ ರಾಜೇಶ್ವರಿ ಇವರ ಪುತ್ರಿಯಾಗಿದ್ದಾಳೆ.




Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries