HEALTH TIPS

ಕಿಸಾನ್ ಸಮ್ಮಾನ್ ನಿಧಿಯ ಮುಂದಿನ ಕಂತಿನ ಸ್ಥಿತಿ ತಿಳಿಯಲು ಹೊಸ ಸಂಖ್ಯೆ ಬಿಡುಗಡೆ!

 

                ವದೆಹಲಿ:ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರು ವರ್ಷಕ್ಕೆ 6000 ರೂಪಾಯಿ ಮೂರು ಕಂತುಗಳಲ್ಲಿ ಪಡೆಯುತ್ತಾರೆ. ಇದುವರೆಗೆ ರೈತರಿಗೆ 11ನೇ ಕಂತು ಬಂದಿದ್ದು, ಇದೀಗ 12ನೇ ಕಂತು ಬರುತ್ತಿದೆ.

             ಈ ಹಣವೂ ಈ ತಿಂಗಳ ಅಂತ್ಯದೊಳಗೆ ರೈತರ ಖಾತೆಗೆ ಜಮೆಯಾಗುವ ಸಾಧ್ಯತೆ ಇದೆ. ಈ ಯೋಜನೆಯ ಭಾಗವಾಗಿ, ಕೇಂದ್ರ ಸರ್ಕಾರವು ರೈತರಿಗೆ ಕೆಲವು ವಿಶೇಷ ಸಂಖ್ಯೆಗಳನ್ನು ನಿಗದಿಪಡಿಸಿದೆ. ಈ ಸಂಖ್ಯೆಗಳ ಮೂಲಕ ರೈತರು ಸಂಪೂರ್ಣ ಮಾಹಿತಿ ಪಡೆಯಬಹುದು.
               ಅಗ್ರಿಕಲ್ಚರ್ ಇಂಡಿಯಾ ತನ್ನ ಅಧಿಕೃತ ಟ್ವೀಟ್‌ನಲ್ಲಿ ಪಿಎಂ ಕಿಸಾನ್ ಯೋಜನೆಗೆ ಅರ್ಜಿ ಸಲ್ಲಿಸಿದ ದೇಶದ ರೈತರಿಗೆ ಅರ್ಜಿಯ ಸ್ಥಿತಿಯನ್ನು ತಿಳಿಯಲು ಸಂಖ್ಯೆಯನ್ನ ಬಿಡುಗಡೆಗೊಳಿಸಿದೆ. ಅರ್ಜಿ ಸಲ್ಲಿಸಿದ ರೈತರು 155261 ಸಂಖ್ಯೆಗೆ ಕರೆ ಮಾಡಿ ಅರ್ಜಿ ಸ್ಥಿತಿ ಮತ್ತು ಕಂತು ನವೀಕರಣದ ಬಗ್ಗೆ ತಿಳಿದುಕೊಳ್ಳಬಹುದು.
               ವೆಬ್‌ಸೈಟ್ ಮೂಲಕ ನಿಮ್ಮ ಕಂತು ಸ್ಥಿತಿಯನ್ನ ಸಹ ನೀವು ಪರಿಶೀಲಿಸಬಹುದು. ನೀವು ಮೊದಲು ಅಧಿಕೃತ ವೆಬ್‌ಸೈಟ್‌ಗೆ ಹೋಗಬೇಕು. ನಂತರ ಬಲಭಾಗದಲ್ಲಿರುವ 'ಫಾರ್ಮರ್ಸ್ ಕಾರ್ನರ್' ಆಯ್ಕೆಯನ್ನ ಆರಿಸಿ. ನಂತರ ಬೆನಿಫಿಶಿಯರಿ ಸ್ಟೇಟಸ್ ಮೇಲೆ . ನಂತರ ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಆಧಾರ್ ಸಂಖ್ಯೆ ಅಥವಾ ಬ್ಯಾಂಕ್ ಖಾತೆಯನ್ನ ಆಯ್ಕೆ ಮಾಡಬೇಕು. ನಂತ್ರ ನಿಮ್ಮ ಖಾತೆಗೆ ಹಣ ಬರುತ್ತದೆಯೇ.? ಇಲ್ಲವೇ.? ಅನ್ನೋದನ್ನ ಪರಿಶೀಲಿಸಬಹುದು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries