HEALTH TIPS

ರಾ.ಹೆದ್ದಾರಿ ಪ್ರಾಧಿಕಾರದ ವಿರುದ್ಧ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹಕ್ಕೆ ಚಾಲನೆ


               ಮಂಜೇಶ್ವರ: ರಾ. ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿ ವಿರುದ್ಧ ಕಳೆದ ಆರು ತಿಂಗಳಿನಿಂದ ಹೋರಾಟ ನಡೆಸುತ್ತಿರುವ ರಾ. ಹೆದ್ದಾರಿ ಹೋರಾಟ ಸಮಿತಿ ಗುರುವಾರ  ಹೋರಾಟದ 3 ನೇ ಹಂತವಾಗಿ ಕುಂಜತ್ತೂರು ರಾ. ಹೆದ್ದಾರಿ ಬದಿಯಲ್ಲಿ ಧರಣಿ ಸತ್ಯಾಗ್ರಹ ನಡೆಯಿತು.
           ಕುಂಜತ್ತೂರು ಹಾಗೂ ಉದ್ಯಾವರ ಗಳಲ್ಲಿ ಸ್ಥಳೀಯರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ದಾಟಲು ಕಡ್ಡಾಯವಾಗಿ ಅಂಡರ್ ಪಾಸ್ ನಿರ್ಮಿಸಿ ಕೊಡಬೇಕು ಎಂಬ ಬೇಡಿಕೆಯೊಂದಿಗೆ ನಡೆಸುತ್ತಿರುವ ಹೋರಾಟಕ್ಕೆ ದಿನದಿಂದ ದಿನಕ್ಕೆ ತೀವ್ರತೆ ಹೆಚ್ಚಾಗುತ್ತಿದೆ. ಮುಂದಿನ ದಿನಗಳಲ್ಲಿ ಅಧಿಕೃತರ ಭಾಗದಿಂದ ಯಾವುದೇ ಸ್ಪಂಧನೆ ಇಲ್ಲವಾದರೆ ಉಪವಾಸ ಸತ್ಯಾಗ್ರಹ ನಡೆಸಿ ಅದರಲ್ಲೂ ಪ್ರಾಧಿಕಾರ ಎಚ್ಚೆತ್ತುಕೊಳ್ಳದಿದ್ದರೆ ಕಾಮಗಾರಿಯನ್ನು ಸ್ಥಗಿತಗೊಳಿಸಲಿರುವುದಾಗಿಯೂ ಹೋರಾಟ ಸಮಿತಿ ಎಚ್ಚರಿಸಿದೆ.
          ಗುರುವಾರ ನಡೆದ ಧರಣಿ ಸತ್ಯಾಗ್ರಹಕ್ಕೆ ಸಂಜೀವ ಶೆಟ್ಟಿ ಮಾಡ ಚಾಲನೆ ನೀಡಿದರು. ಈ ಸಂದರ್ಭ ಹೋರಾಟ ಸಮಿತಿ ಪದಾಧಿಕಾರಿಗಳು ಸೇರಿದಂತೆ ಹಲವಾರು ಮಂದಿ ವೇದಿಕೆಗೆ ಆಗಮಿಸಿ ಬೆಂಬಲವನ್ನು ಸೂಚಿಸಿದರು.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries