HEALTH TIPS

ಬೀದಿ ನಾಯಿಗಳನ್ನು ಕೊಂದರೆ ಜೈಲು ಶಿಕ್ಷೆ: ಸುತ್ತೋಲೆ ಹೊರಡಿಸಿದ ಡಿಜಿಪಿ


              ತಿರುವನಂತಪುರ: ಬೀದಿನಾಯಿಗಳನ್ನು ಕೊಲ್ಲುವುದು ಶಿಕ್ಷಾರ್ಹ ಅಪರಾಧ ಎಂದು ಡಿಜಿಪಿ ಅನಿಲ್ ಕಾಂತ್ ಹೇಳಿದ್ದಾರೆ.ಬೀದಿ ನಾಯಿಗಳ ಸಾಮೂಹಿಕ ಹತ್ಯೆ ತಡೆಯಲು ಜಾಗೃತಿ ಮೂಡಿಸಬೇಕು ಎಂದು ಡಿಜಿಪಿ ಹೇಳಿದ್ದಾರೆ.
          ಬೀದಿ ನಾಯಿಗಳ ಸಮಸ್ಯೆಗೆ ಸಂಬಂಧಿಸಿದಂತೆ ಡಿಜಿಪಿ ಹೊರಡಿಸಿರುವ ಸುತ್ತೋಲೆಯಲ್ಲಿ ಹೀಗೆ ಹೇಳಲಾಗಿದೆ. ಹೈಕೋರ್ಟ್ ನಿರ್ದೇಶನದ ಆಧಾರದ ಮೇಲೆ ಡಿಜಿಪಿ ಸುತ್ತೋಲೆ ಹೊರಡಿಸಲಾಗಿದೆ.
         ಸಾರ್ವಜನಿಕರು ಕಾನೂನನ್ನು ಕೈಗೆ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ನಿಯಂತ್ರಿಸಬೇಕು. ಜನರ ಜೀವಕ್ಕೆ ಅಪಾಯ ತಂದೊಡ್ಡುವ ನಾಯಿಗಳನ್ನು ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಕೊಲ್ಲುತ್ತಿದ್ದಾರೆ. ಇದನ್ನು ತಪ್ಪಿಸಬೇಕು. ಪ್ರತಿಯೊಬ್ಬ ಎಸ್‍ಎಚ್‍ಒ ನಿವಾಸ ಸಂಘದ ಸಹಯೋಗದಲ್ಲಿ ಜಾಗೃತಿ ನಡೆಸಬೇಕು ಎಂದು ಪ್ರಸ್ತಾವನೆಯಲ್ಲಿ ಹೇಳಲಾಗಿದೆ. ಬೀದಿ ನಾಯಿಗಳನ್ನು ಕೊಲ್ಲುವುದು ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದಾದ ಅಪರಾಧ ಎಂದು ಡಿಜಿಪಿ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
        ರಸ್ತೆ ಬದಿಗಳಲ್ಲಿ ಬೀದಿನಾಯಿಗಳಿಗೆದುರಾಗಿ ಹಿಂಸಾಚಾರ ಕಂಡುಬಂದಲ್ಲಿ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಡಿಜಿಪಿ ಎಚ್ಚರಿಸಿದ್ದಾರೆ. ಸಾಕು ನಾಯಿಗಳನ್ನು ಬೀದಿಗೆ ಬಿಡುವುದು ಅಪರಾಧ ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries