ಮಂಜೇಶ್ವರ: ಶ್ರೀ ಪಂಚಲಿಂಗೇಶ್ವರ ದೇವರು ಮತ್ತು ಮಲರಾಯ ದೈವಂಗಳ ಭಂಡಾರ-ಬಾಯಾರು, ಇಲ್ಲಿ ಜರಗುವ ನವರಾತ್ರಿ ಉತ್ಸವದ ಪ್ರಯುಕ್ತ ಅ.3 ರಂದು ರಾತ್ರಿ 7:30 ಕ್ಕೆ ಮೀಯಪದವಿನ ವಿದ್ಯಾವರ್ಧಕ ಬಾಲಿಕೆಯರ ಯಕ್ಷಗಾನ ಬಳಗದಿಂದ 'ಶಿವಾನುಗ್ರಹ' ಕಥಾಭಾಗದ ತಾಳಮದ್ದಳೆ ಜರಗಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ರವಿಶಂಕರ್ ಮಧೂರು, ಚೆಂಡೆಯಲ್ಲಿ ಗೋಪಾಲಕೃಷ್ಣ ನಾವಡ ಮಧೂರು, ಮತ್ತು ಮೃದಂಗದಲ್ಲಿ ಮುರಳೀಮಾಧವ ಮಧೂರು ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿದ್ಯಾವರ್ಧಕ ಬಾಲಿಕೆಯರ ಯಕ್ಷಗಾನ ಬಳಗದಿಂದ ತಾಳಮದ್ದಳೆ
0
September 30, 2022
Tags