ಕಾಸರಗೋಡು: ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯನ್ನು ಜಿಲ್ಲೆಯ ಕೆಲವು ಖಾಸಗಿ ಆಸ್ಪತ್ರೆಗಳು ಬುಡಮಲುಗೊಳಿಸಲು ಯತ್ನಿಸುತ್ತಿರುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು ತಿಳಿಸಿದ್ದಾರೆ.
ಒಂದು ಕುಟುಂಬದಲ್ಲಿ ಐವರು ರೂ.5 ಲಕ್ಷದವರೆಗೆ ಉಚಿತ ಚಿಕಿತ್ಸೆ ಲಭ್ಯವಾಘುತ್ತಿದ್ದರೂ, ಕಾಸರಗೋಡಿನ ಕೆಲವೊಂದು ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ಮುಂಗಡವಾಗಿ ಶುಲ್ಕ ವಸೂಲಿ ಮಾಡುತ್ತದೆ. ಆದರೆ ಈ ಹಣ ಪಾವತಿಗೆ ಯಾವುದೇ ಬಿಲ್ ಅಥವಾ ಇತರ ಪುರಾವೆಗಳನ್ನು ನೀಡಲಾಗುತ್ತಿಲ್ಲ. ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಮಯದಲ್ಲಿ ವಸೂಲುಮಾಡಿದ ಹಣವನ್ನು ಹಿಂದಿರುಗಿಸಲು ಆಸ್ಪತ್ರೆಯ ಅಧಿಕಾರಿಗಳು ಸಿದ್ಧರಾಗುತ್ತಿಲ್ಲ. ಇಂತಹ ಹಲವು ದೂರುಗಳು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳು ಅಳಲು ವ್ಯಕ್ತಪಡಿಸಿದ್ದಾರೆ. ಆರೋಗ್ಯ ವಿಮಾ ಯೋಜನೆಯ ಸದಸ್ಯರಿಗೆ ಉಚಿತ ಚಿಕಿತ್ಸೆ ನೀಡುವ ಬದಲು ಹಣ ದೋಚುವ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರವೀಶ ತಂತ್ರಿ ಕುಂಟಾರು ಎಚ್ಚರಿಸಿದ್ದಾರೆ.
ಆಯುಷ್ಮಾನ್ ಭಾರತ್: ಬುಡಮೇಲುಗೊಳಿಸುತ್ತಿರುವ ಖಾಸಗಿ ಆಸ್ಪತ್ರೆಗಳು: ರವೀಶ ತಂತ್ರಿ ಕುಂಟಾರು
0
September 15, 2022
Tags