HEALTH TIPS

ತೆಚ್ಚಿಕೋಟುಕಾವ್ ರಾಮಚಂದ್ರನ್ ಗೆ ಸಾರ್ವಜನಿಕ ಪ್ರದರ್ಶನ ನೀಡುವುದಕ್ಕೆ ನಿಷೇಧಿಸಿ ಹೈಕೋರ್ಟ್‍ನ ಮಧ್ಯಂತರ ಆದೇಶ


          ಕೊಚ್ಚಿ: ಆನೆ ಪ್ರಿಯರ ಅಚ್ಚುಮೆಚ್ಚಿನ ರಾಮಚಂದ್ರನ ಸಾರ್ವಜನಿಕ ಪ್ರದರ್ಶನವನ್ನು ನಿಷೇಧಿಸಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.
           ಪ್ರಾಣಿಗಳ ಮೇಲಿನ ಕ್ರೌರ್ಯವನ್ನು ತಡೆಗಟ್ಟಲು ಕೆಲಸ ಮಾಡುತ್ತಿರುವ ಇಡುಕ್ಕಿ ಮೂಲದ ಸಂಸ್ಥೆಯು ಸಲ್ಲಿಸಿದ ಮರುಪರಿಶೀಲನಾ ಅರ್ಜಿಯ ಮೇರೆಗೆ ಈ ಆದೇಶ ಬಂದಿದೆ.
           ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಲ್ಲಿಸಿದ್ದ ವರದಿಯಲ್ಲಿ ಆನೆ ಸವಾರಿಯನ್ನು ಶಾಶ್ವತವಾಗಿ ನಿಷೇಧಿಸುವಂತೆ ಶಿಫಾರಸು ಮಾಡಿತ್ತು. ಈ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗಿದೆ. 2017ರಲ್ಲಿ ಆನೆಯ ಬಲಗಣ್ಣು ಸಂಪೂರ್ಣ ಕಳೆದುಕೊಂಡಿದೆ ಎಂದು ವೈದ್ಯಕೀಯ ತಂಡ ವರದಿ ನೀಡಿತ್ತು. ಈ ವರದಿಗೆ ಆರು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ತೆಚಿಕೋಟುಕಾವ್ ದೇವಸ್ವಂಗೆ ನ್ಯಾಯಾಲಯ ಸೂಚಿಸಿದೆ.
         ನ್ಯಾಯಮೂರ್ತಿ ಮುಹಮ್ಮದ್ ಮುಸ್ತಾಕ್ ಮತ್ತು ಅನು ಶಿವರಾಮನ್ ಅವರನ್ನೊಳಗೊಂಡ ಹೈಕೋರ್ಟ್ ವಿಭಾಗೀಯ ಪೀಠವು ಅರ್ಜಿಯ ವಿಚಾರಣೆ ನಡೆಸಿತು.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries