ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕ ವತಿಯಿಂದ 13ನೇ ಕಾಸರಗೋಡು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಡಿ. 31ಹಾಗೂ ಜ. 1ರಂದು ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲೆಯಲ್ಲಿ ಜರುಗಲಿರುವುದು. ಕಾರ್ಯಕ್ರಮದ ಯಶಸ್ವಿಗಾಗಿ ಸ್ವಾಗತ ಸಮಿತಿ ರಚನಾ ಸಭೆ ಅ. 20ರಂದು ಮಧ್ಯಾಹ್ನ 2.30ಕ್ಕೆ ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲಾ ಗ್ರಂಥಾಲಯ ಸಭಾಂಗಣದಲ್ಲಿ ಜರುಗಲಿರುವುದಾಗಿ ಕಸಾಪ ಕೇರಳ ಗಡಿನಾಡ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.
ಪೆರ್ಲದಲ್ಲಿ 13ನೇ ಕಾಸರಗೋಡು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಇಂದು ಸ್ವಾಗತ ಸಮಿತಿ ರಚನಾ ಸಭೆ
0
October 19, 2022