ಸಮರಸ ಚಿತ್ರಸುದ್ದಿ: ಕುಂಬಳೆ: ಪೆರಡಾಲ ನವಜೀವನ ಶಾಲೆಯಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ವಾರ್ತಾ ವಾಚನ ಸ್ಪರ್ಧೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿಯ ಸಮೀಕ್ಷಾ ಕೆ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ನಾರಾಯಣಮಂಗಲ ನಿವಾಸಿ ಶಿಕ್ಷಕ ಮಹೇಶ- ತಾರಾವತಿ ದಂಪತಿ ಸುಪುತ್ರಿಯಾದ ಸಮೀಕ್ಷಳ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.
ವಾರ್ತಾ ವಾಚನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
0
October 11, 2022