HEALTH TIPS

ಉಗ್ರರಿಗೆ ಆರ್ಥಿಕ ನೆರವು: ಜಮ್ಮು ಮತ್ತು ಕಾಶ್ಮೀರದ ಹಲವು ಕಡೆ ಎನ್‌ಐಎ ಶೋಧ

 

            ಶ್ರೀನಗರ: ಭಯೋತ್ಪಾದನೆಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರದ ಹಲವು ಪ್ರದೇಶಗಳಲ್ಲಿ ಮಂಗಳವಾರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

                 ಪೊಲೀಸರು ಹಾಗೂ ಸಿಆರ್‌ಪಿಎಫ್‌ ಸಿಬ್ಬಂದಿ ಜೊತೆಗೆ ತೆರಳಿದ ಎನ್‌ಐಎ ಅಧಿಕಾರಿಗಳು ಜಮ್ಮು ಭಾಗದ ಪೂಂಚ್‌, ರಾಜೌರಿ ಮತ್ತು ಕಾಶ್ಮೀರದ ಪುಲ್ವಾಮಾ, ಶೋಪಿಯಾನ್‌, ಶ್ರೀನಗರ, ಬುದಗಾಮ್‌, ಬಂಡಿಪೋರಾ ಜಿಲ್ಲೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿದ್ದಾರೆ.

                    ಸಮುದಾಯವೊಂದರ ಧಾರ್ಮಿಕ ಪ್ರಚಾರಕ ಹಾಗೂ ಮುಖಂಡ ದಾರುಲ್‌-ಉಲ್‌-ಉಲೂಮ್‌ ರಹೀಮಿಯಾ, ಮೌಲಾನಾ ರೆಹಮತುಲ್ಲಾ ಖಾಸ್ಮಿ ಮತ್ತು ಎನ್‌ಐಟಿ ಶ್ರೀನಗರದ ಪ್ರಾಧ್ಯಾಪಕ ಸಮಮ್‌ ಅಹ್ಮದ್‌ ಲೋನೆ ಸೇರಿದಂತೆ ಹಲವರ ನಿವಾಸಗಳಲ್ಲಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

                    ಉಗ್ರರಿಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ನಡೆಸಲಾಗುತ್ತಿದೆ ಎಂದೂ ಹೇಳಿದ್ದಾರೆ.

                    ಉಗ್ರ ಚಟುವಟಿಕೆಗಳಿಗೆ ಹಣಕಾಸು ನೆರವು, ಆತ್ಮಾಹುತಿ ದಾಳಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಎನ್‌ಐಎ, ಜಮ್ಮು ಮತ್ತು ಕಾಶ್ಮೀರದಲ್ಲಿ 2017ರಿಂದ ನಿರಂತರವಾಗಿ ಶೋಧ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ಸಾಕಷ್ಟು ಜನರನ್ನು ಬಂಧಿಸಿ ವಿಚಾರಣೆಗೂ ಒಳಪಡಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries