HEALTH TIPS

ಸೈಕ್ಲೋನ್; ಭಾರೀ ಮಳೆ ಸಾಧ್ಯತೆ; ಎಚ್ಚರಿಕೆ


               ತಿರುವನಂತಪುರ: ಇಂದು ರಾಜ್ಯದ ವಿವಿಧೆಡೆ  ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗುಡ್ಡಗಾಡು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
                    ಈ ಹಿನ್ನೆಲೆಯಲ್ಲಿ ಇಂದು ಇಡುಕ್ಕಿ ಮತ್ತು ವಯನಾಡಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ತಮಿಳುನಾಡಿನ ಕರಾವಳಿಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತದಿಂದಾಗಿ ಮಳೆಯಾಗಲಿದೆ.
                       ನಾಳೆ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಇಂತಹ ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರುವಂತೆ ಎಚ್ಚರಿಕೆ ನೀಡಲಾಗಿದೆ.ಕೇರಳದಲ್ಲಿ ಅಕ್ಟೋಬರ್ 9 ರಿಂದ 13 ರ ವರೆಗೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.
              ಏತನ್ಮಧ್ಯೆ, ವಯನಾಡಿನಲ್ಲಿ ನಿನ್ನೆ ಸುರಿದ ಭಾರೀ ಮಳೆಗೆ ತಗ್ಗು ಪ್ರದೇಶಗಳು ಜಲಾವೃತವಾಗಿದ್ದವು. ಪೂತಾಡಿ ಪಂಚಾಯತ್ ನ ನಟವಯಲ್ ನೇಯ್ಕುಪ್ಪ ಕಾಲೋನಿ ಹಾಗೂ ನಟವಯಲ್ ಪೇರೂರು ಕಾಲೋನಿ ಜಲಾವೃತಗೊಂಡಿವೆ. ಸುಲ್ತಾನ್ ಬತ್ತೇರಿಯಲ್ಲಿ ನರಸಿ ಹೊಳೆ ಉಕ್ಕಿ ಹರಿಯಿತು.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries