HEALTH TIPS

ಪಟ್ನಾ ಜೈಲಿನಿಂದ ಪರಾರಿಯಾಗಿದ್ದ ಇಬ್ಬರು ಕ್ರಿಮಿನಲ್‌ಗಳ ಎನ್‌ಕೌಂಟರ್‌

 

               ಲಖನೌ: ಬಿಹಾರದ ಪಟ್ನಾ ಜೈಲಿನಿಂದ ಪರಾರಿಯಾಗಿದ್ದ ಸಂಸ್ತೀಪುರದ ಇಬ್ಬರು ಕ್ರಿಮಿನಲ್‌ ಸಹೋದರರನ್ನು ಉತ್ತರ ಪ್ರದೇಶದ ಪೊಲೀಸರು ವಾರಾಣಸಿಯಲ್ಲಿ ಎನ್‌ಕೌಂಟರ್ ಮಾಡಿದ್ದಾರೆ ಎಂದು ವಾರಾಣಸಿ ಪೊಲೀಸ್‌ ಕಮಿಷನರ್ ಸತೀಶ್‌ ಗಣೇಶ್‌ ಸೋಮವಾರ ತಿಳಿಸಿದ್ದಾರೆ.

                  ರಜನೀಶ್‌ ಅಲಿಯಾಸ್ ಬರುವಾ ಮತ್ತು ಮನೀಶ್‌ ಅವರು ಬಡಗಾಂನ್‌ ಪ್ರದೇಶದಲ್ಲಿ ಸಬ್‌ಇನ್‌ಸ್ಪೆಕ್ಟರ್‌ ಅವರ ಸರ್ವಿಸ್‌ ಪಿಸ್ತೂಲ್‌ ಅನ್ನು ಲೂಟಿ ಮಾಡಿದ ಆರೋಪಿಗಳಾಗಿದ್ದು, ಬಿಹಾರ ಜೈಲಿನಿಂದ ತಪ್ಪಿಸಿಕೊಂಡಿದ್ದರು. ಇವರ ಹುಡುಕಾಟದಲ್ಲಿದ್ದ ಪೊಲೀಸರಿಗೆ ಇವರು ವಾರಾಣಸಿಯಲ್ಲಿರುವ ಮಾಹಿತಿ ದೊರೆತಿದ್ದು, ಸ್ಥಳಕ್ಕೆ ತೆರಳಿದಾಗಿ ಪೊಲೀಸರು ಹಾಗೂ ಆರೋಪಿಗಳ ನಡುವೆ ಗುಂಡಿನ ಚಕಮಕಿ ನಡೆಯಿತು. ಇದರಲ್ಲಿ ಆರೋಪಿಗಳಾದ ರಜನೀಶ್ ಹಾಗೂ ಮನೀಶ್ ಎನ್‌ಕೌಂಟರ್‌ಗೆ ಬಲಿಯಾದರೆ, ಇವರ ಇನ್ನೊಬ್ಬ ಸಹೋದರ ಲಲ್ಲನ್‌ ಸ್ಥಳದಿಂದ ಪರಾರಿಯಾದ ಎಂದು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries