HEALTH TIPS

ಜಮ್ಮು ಚುನಾವಣೆಯನ್ನು ಭದ್ರತೆ ದೃಷ್ಟಿಯಲ್ಲಿ ನೋಡಬೇಕು: ಅಮಿತ್ ಶಾ

 

                  ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಯನ್ನು ಭದ್ರತೆಯ ದೃಷ್ಟಿಯಲ್ಲಿ ನೋಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತಾ ಶಾ ಹೇಳಿಕೆ ನೀಡಿರುವುದನ್ನು ಗಮನಿಸಿದರೆ ಮುಂದಿನ ವರ್ಷದ ಏಪ್ರಿಲ್‌ವರೆಗೆ ಚುನಾವಣೆ ನಡೆಯುವ ಲಕ್ಷಣಗಳು ಕಾಣುತ್ತಿಲ್ಲ.

                       ಟಿ.ವಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಶಾ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ. ಆದರೆ, ನಾವು ಈ ಚುನಾವಣೆಯನ್ನು ಭದ್ರತೆ ದೃಷ್ಟಿಯಲ್ಲಿ ನೋಡಬೇಕು. ಈ ಬಗ್ಗೆ ಚುನಾವಣಾ ಆಯೋಗವೇ ನಿರ್ಧರಿಸಬೇಕಾಗುತ್ತದೆ ಎಂದು ತಿಳಿಸಿದ್ದರು.

                  ಬಿಜೆಪಿ-ಪಿಡಿಪಿ ಮೈತ್ರಿಕೂಟದಿಂದ ಬಿಜೆಪಿಯು 2018ರಲ್ಲಿ ಹೊರಬಂದ ಕಾರಣ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿ, ರಾಜ್ಯವಾಗಿದ್ದ ಜಮ್ಮು ಮತ್ತು ಕಾಶ್ಮೀರವನ್ನು ಲಡಾಖ್‌, ಜಮ್ಮು ಮತ್ತು ಕಾಶ್ಮೀರ ಎಂದು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಲಾಯಿತು.

                  ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡು ವರ್ಷಗಳ ನಂತರ ಚುನಾವಣೆ ಬಗ್ಗೆ ಮಾತುಕತೆ ನಡೆದಿದ್ದು, ಆಯೋಗವು ಮತದಾರರ ಪರಿಷ್ಕೃತ ಪಟ್ಟಿಯನ್ನು ನವೆಂಬರ್‌ 25ರ ಒಳಗೆ ಅಂತಿಮಗೊಳಿಸಬೇಕಾಗಿದೆ. ಚುನಾವಣೆ ನಡೆಸಬೇಕು ಎಂಬ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಶಾ ಅವರು ಚುನಾವಣೆಗೆ ಭದ್ರತೆ ಮುಖ್ಯ ಎಂದು ಹೇಳಿರುವುದನ್ನು ನೋಡಿದರೆ ಕೇಂದ್ರಕ್ಕೆ ಚುನಾವಣೆ ನಡೆಸಲು ಆಸಕ್ತಿ ಇದ್ದಂತೆ ಕಾಣುತ್ತಿಲ್ಲ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries