HEALTH TIPS

ಭಯೋತ್ಪಾದನೆ ಬಿಟ್ಟರೆ ಪಾಕ್‌ ಸಂಬಂಧಕ್ಕೆ ಸಿದ್ಧ: ಭಾರತ

 

         ನವದೆಹಲಿ: 'ಪಾಕಿಸ್ತಾನದೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳಲು ಭಾರತ ಯಾವಾಗಲೂ ಬಯಸುತ್ತದೆ. ಆದರೆ, ಭಯೋತ್ಪಾದನೆ ಹಾಗೂ ಹಿಂಸೆಯಿಂದ ಮುಕ್ತವಾದ ವಾತಾವರಣದಲ್ಲಿ ಮಾತ್ರ ಇಂಥ ಸಂಬಂಧ ಇರಿಸಿಕೊಳ್ಳಲು ಸಾಧ್ಯ' ಎಂದು ಭಾರತವು ಗುರುವಾರ ಹೇಳಿದೆ.

             ಪಾಕಿಸ್ತಾನದ ಪ್ರಧಾನಿ ಶಹಬಾಜ್‌ ಷರೀಫ್ ಅವರು ಕಳೆದ ವಾರ ದುಬೈ ಮೂಲದ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದ ಕುರಿತು ಹೇಳಲಾದ ಪ್ರಶ್ನೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗಚಿ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

             'ಭಾರತದೊಂದಿಗೆ ಮೂರು ಯುದ್ಧಗಳನ್ನು ಮಾಡಿ, ನಾವು ಪಾಠ ಕಲಿತಿದ್ದೇವೆ. ಭಾರತದೊಂದಿಗೆ ಶಾಂತಿಯಿಂದ ಇರಲು ಈಗ ನಾವು ಬಯಸುತ್ತೇವೆ. ನಮ್ಮ ನಡುವಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಾಧ್ಯವಿದೆ' ಎಂದು ಪಾಕಿಸ್ತಾನ ಪ್ರಧಾನಿ ಹೇಳಿದ್ದರು.

            'ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ್ದನ್ನು ಭಾರತ ಸರ್ಕಾರವು ಹಿಂಪಡೆಯುವವರೆಗೆ ಮಾತುಕತೆ ಸಾಧ್ಯವಿಲ್ಲ' ಎಂದು ಪಾಕಿಸ್ತಾನದ ಪ್ರಧಾನ ಮಂತ್ರಿ ಕಚೇರಿ ಹೇಳಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries