ಉಪ್ಪಳ: ಪೈವಳಿಕೆ ಕಾಯರ್ಕಟ್ಟೆ ಶ್ರೀಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ 21ನೇ ವಾರ್ಷಿಕೋತ್ಸವದ ಅಂಗವಾಗಿ ಪೈವಳಿಕೆಯ ಬೆನಕ ಯಕ್ಷಕಲಾ ವೇದಿಕೆಯ ನೇತೃತ್ವದಲ್ಲಿ ಹಿರಿಯ ಯಕ್ಷಗಾನ ಕಲಾವಿದ, ಪ್ರಸಾಧನ ಕಲಾವಿದ ದಿ. ದೇವಕಾನ ಕೃಷ್ಣ ಭಟ್ಟರ ಸ್ಮರಣಾರ್ಥ ಯಕ್ಷಗಾನ ಬಯಲಾಟ ಜ.28 ರಂದು ರಾತ್ರಿ 8 ರಿಂದ ಕಾಯರ್ಕಟ್ಟೆ ಅಯ್ಯಪ್ಪ ಭಜನಾ ಮಂದಿರ ಪರಿಸರದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಗುರು, ಪಡ್ರೆಚಂದು ಸ್ಮಾರಕ ಯಕ್ಷಗಾನ ತರಬೇತಿ ಕೇಂದ್ರ ಪೆರ್ಲದ ಪ್ರಾಚಾರ್ಯ ಸಬ್ಬಣಕೋಡಿ ರಾಮ ಭಟ್ ಅವರಿಗೆ ಗುರುವಂದನೆ, ಹಿಮ್ಮೇಳ ಕಲಾವಿದರಾದ ತೆಂಕಬೈಲು ಮುರಳೀಕೃಷ್ಣ ಶಾಸ್ತ್ರಿ, ಶೇಣಿ ಸುಬ್ರಹ್ಮಣ್ಯ ಭಟ್ ಹಾಗೂ ನಿಡುವಜೆ ಶಂಕರ ಭಟ್ ಅವರಿಗೆ ಗೌರವಾಭಿನಂದನೆ ಗಣ್ಯ ಸಮ್ಮುಖದಲ್ಲಿ ನಡೆಯಲಿದೆ. ಬಳಿಕ ಬಳಿಕ ಮಕ್ಕಳ ತಂಡದ ರಂಗಪ್ರವೇಶ, ವೀರ ಬಬ್ರುವಾಹನ ಹಾಗೂ ಹಿರಿಯ ಕಲಾವಿದರಿಂದ ನರಕಾಸುರಮೋಕ್ಷ ಯಕ್ಷಗಾನ ಬಯಲಾಟ ನಡೆಯಲಿದೆ.
ದೇವಕಾನ ಸ್ಮರಣಾರ್ಥ ಯಕ್ಷಗಾನ ಬಯಲಾಟ
0
January 25, 2023