ಮಂಜೇಶ್ವರ: ದೇಶಿಯ ಅಧ್ಯಾಪಕ ಪರಿಷತ್ (ಎನ್.ಟಿ.ಯು) ಇದರ ಮಂಜೇಶ್ವರ ಉಪಜಿಲ್ಲಾ ಸಮ್ಮೇಳನ ಎಸ್.ಆರ್.ಎ. ಯು.ಪಿ ಶಾಲೆ ಕುಬಣೂರಿನಲ್ಲಿ ಜರಗಿತು. ಉಪಜಿಲ್ಲಾ ಅಧ್ಯಕ್ಷೆ ಚಂದ್ರಿಕಾ.ಕೆ.ಆರ್ ಧ್ವಜಾರೋಹಣಗೈದರು. ಬಳಿಕ ನಡೆದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಉಪಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಕೆ.ಆರ್ ವಹಿಸಿದ್ದರು. ಎಸ್.ಆರ್.ಎ. ಯು.ಪಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಶೆಟ್ಟಿ ಅವರು ದೀಪ ಪ್ರಜ್ವಲನಗೈದು ಉದ್ಘಾಟಿಸಿದರು.
ಜಿಲ್ಲಾಧ್ಯಕ್ಷ ರಂಜಿತ್, ಸಹಕಾರ ಭಾರತಿಯ ಜಿಲ್ಲಾ ಸಮಿತಿ ಪ್ರ. ಕಾರ್ಯದರ್ಶಿ ವಿಘ್ನೇಶ್ವರ ಕೆದುಕೊಡಿ, ಎಸ್.ಆರ್.ಎ. ಯು.ಪಿ ಶಾಲಾ ಮುಖ್ಯೋಪಾಧ್ಯಾಯಿನಿ ಆರತಿ ಟೀಚರ್ ಶುಭಹಾರೈಸಿದರು. ಕಾರ್ಯದರ್ಶಿ ರಘುವೀರ್ ರಾವ್ ಸ್ವಾಗತಿಸಿ, ದಯಾನಂದ ಕುಬಣೂರು ವಂದಿಸಿದರು. ಈಶ್ವರ ಕಿದೂರ್ ನಿರೂಪಿಸಿದರು.
ಬಳಿಕ ಜರಗಿದ ಸಂಘಟನಾ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಉಪಾಧ್ಯಕ್ಷ ಅರವಿಂದಾಕ್ಷ ಭಂಡಾರಿ ವಹಿಸಿದ್ದರು. ಸಹಕಾರ ಭಾರತಿ ಜಿಲ್ಲಾ ಸಮಿತಿ ಅಧ್ಯಕ್ಷ ಅಶೋಕ್ ಬಾಡೂರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಪ್ರಾಂತ ಉಪಾಧ್ಯಕ್ಷ ವೆಂಕಪ್ಪ ಶೆಟ್ಟಿ, ಜಿಲ್ಲಾ ಪ್ರ. ಕಾರ್ಯದರ್ಶಿ ಅಜಿತ್ ಕುಮಾರ್, ಉಪಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಟೀಚರ್ ಮಾರ್ಗದರ್ಶನ ನೀಡಿದರು. ಉಪಜಿಲ್ಲಾ ಕಾರ್ಯದರ್ಶಿ ರಘುವೀರ್ ರಾವ್ ವಾರ್ಷಿಕ ವರದಿ ಮಂಡಿಸಿದರು.
ಕೋಶಾಧಿಕಾರಿ ಈಶ್ವರ್ ಕಿದೂರು ಲೆಕ್ಕ ಪತ್ರ ಮಂಡಿಸಿದರು. ಇದೇ ಸಂದರ್ಭ ನೂತನ ಪದಾಧಿಕಾರಿಗಳನ್ನು ಅರಿಸಲಾಯಿತು. ನೂತನ ಅಧ್ಯಕ್ಷೆಯಾಗಿ ಚಂದ್ರಿಕಾ ಟೀಚರ್, ಪ್ರ.ಕಾರ್ಯದರ್ಶಿಯಾಗಿ ದಯಾನಂದ ಕುಬಣೂರು ಹಾಗೂ ಕೋಶಾಧಿಕಾರಿಯಾಗಿ ರಘುವೀರ್ ರಾವ್ ಆಯ್ಕೆಗೊಂಡರು. ದೇವಿಪ್ರಸಾದ್ ಉಚ್ಚಿಲ್ ಸ್ವಾಗತಿಸಿ, ರವೀಂದ್ರ ರೈ ವಂದಿಸಿದರು.