ಕುಂಬಳೆ: ಕಲಾಕುಂಚ ಸಾಂಸ್ಕøತಿಕ ಸಂಸ್ಥೆ - ದಾವಣಗೆರೆ ಇದರ ಕೇರಳ ಗಡಿನಾಡ ಶಾಖೆಯಿಂದ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಪೂರ್ವ ಸಿಧ್ಧತಾ ಕಾರ್ಯಾಗಾರ ಬುಧವಾರ ನಡೆಯಿತು. ಕೇರಳ ಶಾಖೆಯ ಅಧ್ಯಕ್ಷೆ ಜಯಲಕ್ಷ್ಮಿ ಕಾರಂತ ಸಂಸ್ಥೆಯ ಧ್ಯೇಯೋದ್ಧೇಶಗಳನ್ನು ವಿವರಿಸಿದರು. ಕಲಾಕುಂಚದ ಸಂಸ್ಥಾಪಕ ಸಾಲಿಗ್ರಾಮ ಗಣೇಶ ಶೆಣೈ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಮುಖ್ಯೊಪಾಧ್ಯಾಯ ಗೋವಿಂದ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ವ್ಯವಸ್ಥಾಪಕ ಶಂಕರನಾರಾಯಣ ಭಟ್ ಶುಭಾಶಂಸನೆಗೈದರು. ಜಯಶ್ರೀ ರಾಜು ಮತ್ತಿತರರು ಉಪಸ್ಥಿತರಿದ್ದರು. ಶಿವಪ್ರಸಾದ್ ಸಿ ಹಾಗೂ ಶಶಿಧರ ಕೆ ಕಾರ್ಯಕ್ರಮವನ್ನು ನಿರೂಪಿಸಿದರು.