ಕಾಸರಗೋಡು: ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕಾಸರಗೋಡು ವಿದ್ಯಾನಗರದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ಬಂದರು ಮತ್ತು ಪ್ರಾಚ್ಯವಸ್ತು ಖಾತೆ ಸಚಿವ ಅಹಮ್ಮದ್ ದೇವರ್ಕೋವಿಲ್ ಧ್ವಜಾರೋಹಣ ನಡೆಸುವರು.
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಕಾಸರಗೋಡಿನಲ್ಲೂ ಭಾರಿ ರಕ್ಷಣಾ ವ್ಯವಸ್ಥೆ ಕಲ್ಪಿಸಲಾಗಿದೆ. ಎರಡು ದಿವಸಗಳಿಂದ ರೈಲ್ವೆನಿಲ್ದಾಣ, ಬಸ್ ನಿಲ್ದಾಣ, ಮಾರ್ಕೆಟ್ ಸೇರಿದಂತೆ ಜನಸಂದಣಿ ಏರ್ಪಡುವ ಜಾಗದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಇತರ ರಾಜ್ಯಗಳಿಂದ ಗಡಿದಾಟಿ ಆಗಮಿಸುವ ವಾಹನಗಳನ್ನು ತಪಾಸಣೆ ನಡೆಸಿ ಜಿಲ್ಲೆಯೊಳಗೆ ಬಿಡಲಾಗುತ್ತಿದೆ. ಇನ್ನು ಸಮುದ್ರ ಮಾರ್ಗದಲ್ಲೂ ಕಟ್ಟೆಚ್ಚರ ಪಾಲಿಸಲಾಗುತ್ತಿದೆ. ಜಿಲ್ಲೆಯ ಕರಾವಳಿ ಪೊಲೀಸ್ ಠಾಣೆಗಳಲ್ಲಿ ಪೆಟ್ರೋಲಿಂಗ್ ಬಿಗುಗೊಳಿಸಲಾಗಿದೆ. ಕಾಸರಗೋಡು ರೈಲ್ವೆ ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರೀಯ ದಳ ತಪಾಸಣೆ ಚಉರುಕುಗೊಳಿಸಿದ್ದು, ಪೊಲೀಸ್ ಇಲಾಖೆಯ ಎರಡು ಶ್ವಾನಗಳು ನಿರಂತರ ತಪಾಸಣಾ ಕಾರ್ಯದಲ್ಲಿ ನಿರತವಾಗಿದೆ. ಪಾರ್ಸೆಲ್ಗಳನ್ನೂ ಹೆಚ್ಚಿನ ತಪಾಸಣೆಗೊಳಪಡಿಸಲಾಗುತ್ತಿದ್ದು, ಸಂಶಯಾಸ್ಪದ ವಸ್ತುಗಳ ಬಗ್ಗೆ ಹೆಚ್ಚಿನ ನಿಗಾವಹಿಸಲಾಗುತ್ತಿದೆ. ಪಥಸಂಚಲನ ನಡೆಯಲಿರುವ ವಿದ್ಯಾನಗರದ ನಗರಸಭಾ ಸ್ಟೇಡಿಯಂನ ಒಳಗೆ ಹಾಗೂ ಆಸುಪಾಸು ಭದ್ರತೆ ಹೆಚ್ಚಿಸಲಾಗಿದೆ.
ಗಣರಾಜ್ಯೋತ್ಸವ-ಕಾಸರಗೋಡು ಜಿಲ್ಲೆಯಲ್ಲಿ ಮುoದುವರಿದ ಬಿಗು ತಪಾಸಣೆ
0
January 25, 2023