No title
0
October 31, 2017
ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವಕ್ಕೆ ನೀಚರ್ಾಲಿನಲ್ಲಿ ಚಾಲನೆ
ಬದಿಯಡ್ಕ: ಗ್ರಾಮ್ಯ ವಾತಾವರಣದ ಪೆರಡಾಲದಿಂದ ಬೆಳೆಯುತ್ತಾ ಬಂದು ನೀಚರ್ಾಲಿಗೆ ಸೇರಿದ ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಐದು ದಿನಗಳ ಕಾಲ ನಡೆಯಲಿರುವ 58ನೇ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವಕ್ಕೆ ನೀಚರ್ಾಲು ಶೃಂಗಾರದಿಂದ ಸಜ್ಜುಗೊಂಡಿದೆ. ಆಕರ್ಷಕ ಸ್ವಾಗತ ಕಮಾನು, ವಿವಿಧ ವೇದಿಕೆಗಳು, ಚಪ್ಪರ ಸ್ಪಧರ್ಾಳುಗಳಿಗೆ ಆತಿಥ್ಯ ನೀಡಲು ಸಜ್ಜುಗೊಂಡಿವೆ. ಮಂಗಳವಾರ ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿ ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದರು. ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಶಂಕರ.ಡಿ, ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೈಲಾಸಮೂತರ್ಿ, ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿಯ ನೀಚರ್ಾಲು ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್.ಎಂ, ಸಂಘಟನಾ ಸಮಿತಿ ಅಧ್ಯಕ್ಷ ಎಸ್.ನಾರಾಯಣ, ಕುಂಬಳೆ ಉಪಜಿಲ್ಲಾ ಮುಖ್ಯೋಪಾಧ್ಯಾಯರುಗಳ ಪೋರಂ(ಹೆಡ್ ಮಾಸ್ಟಸರ್್ ಫೋರಂ) ನ ಸಂಚಾಲಕ ವಿಷ್ಣುಪಾಲ.ಬಿ, ನಿವೃತ್ತ ಮುಖ್ಯೋಪಾಧ್ಯಾಯ ಕೆ.ಶಂಕರನಾರಾಯಣ ಶರ್ಮ, ನಿವೃತ್ತ ಉಪನ್ಯಾಸಕ ಪ್ರೊ.ಎ. ಶ್ರೀನಾಥ್, ಕೃಷ್ಣ ಮಣಿಯಾಣಿ ಮೊಳೆಯಾರು, ಬಾಲಗೋಪಾಲ ಏಣಿಯಪರ್ು ಮತ್ತಿತರರು ಉಪಸ್ಥಿತರಿದ್ದರು. ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಮುಖ್ಯೋಪಾಧ್ಯಾಯ ವೆಂಕಟರಾಜ ಸಿ.ಎಚ್. ಸ್ವಾಗತಿಸಿ, ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಎಚ್.ಎನ್.ಮೀನಾಕ್ಷಿ ವಂದಿಸಿದರು.