HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ತುಳುನಾಡಿನ ಸಂಸ್ಕ್ರತಿಯಂತೆ ಪ್ರಧಾನಿಯನ್ನು ಸ್ವಾಗತಿಸಲು ಸಜ್ಜಾಗಿದೆ ಧರ್ಮಸ್ಥಳ ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಭರದ ಸಿದ್ಧತೆಗಳು ನಡೆದಿವೆ. ಅಕ್ಟೋಬರ್ 29ಕ್ಕೆ ಧರ್ಮಸ್ಥಳಕ್ಕೆ ಆಗಮಿಸಲಿರುವ ನರೇಂದ್ರ ಮೋದಿ ಅವರಿಗೆ ತುಳುನಾಡಿನ ಶೈಲಿಯಲ್ಲಿ ಸ್ವಾಗತ ನಡೆಸಲು ಧರ್ಮಸ್ಥಳದ ಧಮರ್ಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆ ಅವರು ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಅಕ್ಟೋಬರ್ 29 ರಂದು ಬೆಳಗ್ಗೆ ಸುಮಾರು 11.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಧರ್ಮಸ್ಥಳದ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ತದ ನಂತರ ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಮೋದಿ ಬಹಿರಂಗ ಸಭೆ ನಡೆಸಲಿದ್ದಾರೆ. ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕೆಂಬುದು ಕರಾವಳಿಯ ಜನರ ಕೋರಿಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ಬಳಿ ಬಹಿರಂಗವಾಗಿ ಪ್ರಸ್ಥಾಪಿಸಲಿದ್ದೇನೆ ಎಂದು ಧರ್ಮಸ್ಥಳ ಧಮರ್ಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries