ಯಾವುದೇ ಶೀರ್ಷಿಕೆಯಿಲ್ಲ
0
ಅಕ್ಟೋಬರ್ 24, 2017
ವಿಜೃಂಭಣೆಯಿಂದ ಜರುಗಿದ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯೋತ್ಸವ
ಮಂಗಳೂರು: ಧರ್ಮಸ್ಥಳ ಧಮರ್ಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ 50ನೇ ಪಟ್ಟಾಭಿಷೇಕ ವರ್ಧಂತ್ಯೋತ್ಸ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಜೃಂಭಣೆಯಿಂದ ನಡೆಯಿತು. ಪಟ್ಟಾಭಿಷೇಕದ ಸುವರ್ಣ ಸಂಭ್ರಮದಲ್ಲಿ ಧರ್ಮಸ್ಥಳ ಧಮರ್ಾಧಿಕಾರಿ ಹೆಗ್ಗಡೆ ಜನರು ಸ್ವತಃ ತಮ್ಮದೇ ಉತ್ಸವ ಎನ್ನುವಂತೆ ವರ್ಧಂತ್ಯೋತ್ಸವವನ್ನು ಆಚರಿಸದರು. ಪಟ್ಟಾಭಿಷೇಕ ವರ್ಧಂತಿಯ ಸುವರ್ಣ ಮಹೋತ್ಸವ ಸಡಗರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಪರಿಸರ ಮಧುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. ಯದುವೀರ್ ಪ್ರಮುಖ ಆಕರ್ಷಣೆ ಯದುವೀರ್ ಪ್ರಮುಖ ಆಕರ್ಷಣೆ ಉತ್ಸವಕ್ಕೆ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮನ ಪ್ರಮುಖ ಆಕರ್ಷಣೆಯಾಗಿತ್ತು. ಮೈಸೂರು ಮಹಾರಾಜರನ್ನು ದೇವಸ್ಥಾನದ ಆಡಳಿತ ಮಂಡಳಿ ಭವ್ಯ ಮೆರವಣಿ ಮೂಲಕ ಸ್ವಾಗತಿಸಿತು. ಪಟ್ಟಾಭಿಷಿಕ್ತರಾಗಿ 49 ವರ್ಷ ಪಟ್ಟಾಭಿಷಿಕ್ತರಾಗಿ 49 ವರ್ಷ ನ್ಯಾಯದೇಗುಲವೆಂದೇ ಹೆಸರು ಗಳಿಸಿರುವ ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಧಮರ್ಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಹೆಗ್ಗಡೆ ಧಮರ್ಾಧಿಕಾರಿ ಪಟ್ಟ ಅಲಂಕರಿಸಿ 49 ವರ್ಷ ಪೂರೈಸಿದ್ದಾರೆ. ಸುವರ್ಣ ಸಂಭ್ರಮ ಸುವರ್ಣ ಸಂಭ್ರಮ 1968ರ ಅಕ್ಟೋಬರ್ 24ರಂದು ಧರ್ಮಸ್ಥಳದ 21ನೇ ಧಮರ್ಾಧಿಕಾರಿಯಾಗಿ ವೀರೇಂದ್ರ ಹೆಗ್ಗಡೆಯವರು ಪಟ್ಟಾಭಿಷಿಕ್ತರಾಗಿದ್ದರು. ಈ ವರ್ಷ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ ಸಂಭ್ರಮ. ಸಮಾಜದ ಎಲ್ಲಾ ಸದ್ಕಾರ್ಯಗಳಲ್ಲಿ ಧ್ರುವ ನಕ್ಷತ್ರವಾಗಿರುವ ಧರ್ಮಸ್ಥಳ ಧಮರ್ಾಧಿಕಾರಿಗಳ ಉತ್ಸವ ಸಾವಿರಾರು ಅಭಿಮಾನಿಗಳ ಶುಭ ಹಾರೈಕೆಯೊಂದಿಗೆ ಸಂಪನ್ನಗೊಂಡಿದೆ. ಸಾರ್ವಜನಿಕರಿಂದ ಅಭಿಮಾನಿಗಳ ಮಹಾಪೂರ ಸಾರ್ವಜನಿಕರಿಂದ ಅಭಿಮಾನಿಗಳ ಮಹಾಪೂರ ಬೆಳಗ್ಗೆ ಮಂಜುನಾಥ ಸ್ವಾಮಿಯ ದರ್ಶನ ಪಡೆದ ವಿರೇಂದ್ರ ಹೆಗ್ಗಡೆ ಕುಟುಂಬ ದೇವರಿಗೆ ವಿಶೇಷ ಪೂಜೆ ಸಲ್ಲಸಿತು. ನಂತರ ತಮ್ಮ ನಿವಾಸದಲ್ಲಿ ಅಭಿಮಾನಿಗಳ ಜೊತೆ ಕಾಲ ಕಳೆದ ವಿರೇಂದ್ರ ಹೆಗ್ಗಡೆಯವರಿಗೆ ಸಾವಿರಾರು ಅಭಿಮಾನಿಗಳು, ಯತಿಶ್ರೇಷ್ಠರು, ವಿವಿಧ ಕ್ಷೇತ್ರಗಳ ಗಣ್ಯರು ಫಲ-ಪುಷ್ಪ ನೀಡಿ ಶುಭಾಶಯ ಸಲ್ಲಿಸಿದರು. ಅದ್ಧೂರಿ ಮೆರವಣಿಗೆ ಅದ್ಧೂರಿ ಮೆರವಣಿಗೆ ಉತ್ಸವದ ಹಿನ್ನೆಲೆಯಲ್ಲಿ ನೆಲ್ಯಾಡಿ ಬೀಡುವಿನಿಂದ ದೇವಸ್ಥಾನದ ಪ್ರಮುಖ ರಸ್ತೆಗಳಲ್ಲಿ ವಿಶೇಷ ವಾಹನದ ಮೂಲಕ ವೀರೇಂದ್ರ ಹೆಗ್ಗಡೆಯವರ ಮೆರವಣಿಗೆ ನಡೆಸಲಾಯಿತು. ನಾಡಿನ ಸಂಸ್ಕೃತಿ, ಪರಂಪರೆ ಸಾರುವ ಸ್ತಬ್ಧಚಿತ್ರಗಳು, ಕಲಾ ಪ್ರಕಾರಗಳು ಧರ್ಮಸ್ಥಳದ ಹಿರಿಮೆಯನ್ನು ಸಾರಿದವು. ಜನರ ಪ್ರೀತಿಗೆ ಆಭಾರಿ ಜನರ ಪ್ರೀತಿಗೆ ಆಭಾರಿ ಈ ನಡುವೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಾ.ಡಿ. ವೀರೇಂದ್ರ ಹೆಗ್ಗಡೆ , "ಈ ಹಿಂದಿನ ಧಮರ್ಾಧಿಕಾರಿಗಳ ರೂಪದಲ್ಲಿಯೇ ಸೇವಾ ಕಾರ್ಯಗಳನ್ನು ಮುಂದುವರಿಸಿದ್ದೇನೆ. ರಾಜ್ಯದಾದ್ಯಂತ ಜನರು ಪ್ರೀತಿ ಇಟ್ಟುಕೊಂಡಿದ್ದಾರೆ. ಅವರೆಲ್ಲರಿಗೂ ಆಭಾರಿಯಾಗಿದ್ದೇನೆ," ಎಂದು ಹೇಳಿದರು. ಪಟ್ಟಾಭಿಷೇಕ ಮಹೋತ್ಸವ ಕಣ್ತುಂಬಿಕೊಂಡ ಜನರು ಪಟ್ಟಾಭಿಷೇಕ ಮಹೋತ್ಸವ ಕಣ್ತುಂಬಿಕೊಂಡ ಜನರು ಒಟ್ಟಿನಲ್ಲಿ ಡಾ.ಹೆಗ್ಗಡೆಯವರ ಪಟ್ಟಾಭಿಷೇಕದ 50ನೇ ವರ್ಧಂತಿ ಹಿನ್ನೆಲೆಯಲ್ಲಿ ಧರ್ಮಸ್ಥಳ ಮತ್ತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆಗೆ ಪಾತ್ರವಾಗಿದೆ. ಸಾವಿರಾರು ಜನರು ಹೆಗ್ಗಡೆಯವರ ಅಪರೂಪದ ಭವ್ಯ ಪಟ್ಟಾಭಿಷೇಕ ಮಹೋತ್ಸವವನ್ನು ಕಣ್ತುಂಬಿಕೊಂಡಿದ್ದಾರೆ.








