No title
0
December 01, 2017
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ
ಮಂಜೇಶ್ವರ: ಕುಂಜತ್ತೂರು ಸಮೀಪದ ತೂಮಿನಾಡು ಸಾರ್ವಜನಿಕ ಶ್ರೀ ಮಹಾಕಾಳಿ ಭಜನಾ ಮಂದಿರದ ಬೆಳ್ಳಿ, ನೂತನ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮತ್ತು ನವ ಚಂಡಿಕಾ ಯಾಗ ಫೆಬ್ರವರಿ 19 ರಿಂದ 21ರ ವರೆಗೆ ನಡೆಯಲಿದ್ದು, ಇದರ ಆಹ್ವಾನ ಪತ್ರಿಕೆಯ ಬಿಡುಗಡೆ ಇತ್ತೀಚೆಗೆ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಿತು.
ಶ್ರೀಕ್ಷೇತ್ರದ ಧಮರ್ಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದರು. ಭಜನಾ ಮಂದಿರದ ಜೀಣರ್ೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀಕೃಷ್ಣ ಶಿವಕೃಪಾ ಕುಂಜತ್ತೂರು, ಗೌರವಾಧ್ಯಕ್ಷ ಆನಂದ ಮಾಸ್ತರ್ ತೂಮಿನಾಡು, ಕಾಯರ್ಾಧ್ಯಕ್ಷ ಮೋಹನ ಶೆಟ್ಟಿ ತೂಮಿನಾಡು, ಉಪಾಧ್ಯಕ್ಷ ಬಾಲಕೃಷ್ಣ ದೀಕ್ಷಾವುಡ್, ಪ್ರಧಾನ ಕಾರ್ಯದಶರ್ಿ ಕಮಲಾಕ್ಷ ತೂಮಿನಾಡು, ಕೋಶಾಧಿಕಾರಿ ವಿಶ್ವನಾಥ ಶೆಟ್ಟಿ ಮಡಿವಾಲ್ ಪಾಲ್, ಭಜನಾ ಸಂಘದ ಅಧ್ಯಕ್ಷ ದೇವದಾಸ್ ಶೆಟ್ಟಿ, ಶಿಲ್ಪಿ ರಾಧಾಕೃಷ್ಣ ಆಚಾರ್ಯ ಹಾಗೂ ಮಹಿಳಾ ವಿಭಾಗದ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.