HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಮನ್ಕೀ ಬಾತ್= 26/11 ದಾಳಿಯ ಹುತಾತ್ಮರನ್ನು ಸ್ಮರಿಸಿದ ಪ್ರಧಾನಿ: ಉಗ್ರವಾದದ ವಿರುದ್ಧ ಕಠಿಣ ಕ್ರಮಕ್ಕೆ ಪ್ರತಿಜ್ಞೆ ಪ್ರಧಾನಿ ನರೇಂದ್ರ ಮೋದಿ ನವದೆಹಲಿ: ನ.26 ರಂದು ಮನ್ ಕಿ ಬಾತ್ ನ 38 ನೇ ಸಂಚಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, 26/11 ಉಗ್ರ ದಾಳಿಯಲ್ಲಿ ಮಡಿದ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ. ನ.26 ದೇಶದ ಸಂವಿಧಾನ ಅಳವಡಿಸಿಕೊಂಡ ದಿನವಾಗಿದೆ. ನ.26 ರಂದು ಸಂವಿಧಾನವನ್ನು ಸ್ಮರಿಸಬೇಕು, ಆದರೆ 9 ವರ್ಷಗಳ ಹಿಂದೆ ಮುಂಬೈ ನಲ್ಲಿ ಭೀಕರ ಉಗ್ರ ದಾಳಿ ಸಂಭವಿಸಿತ್ತು, ಉಗ್ರದಾಳಿಯಲ್ಲಿ ಹೋರಾಡಿ ಹುತಾತ್ಮರಾದ ಯೋಧರ ತ್ಯಾಗವನ್ನು ಯಾರೂ ಮರೆಯಲು ಸಾಧ್ಯವಿಲ್ಲ ಎಂದು ಮೋದಿ ಹೇಳಿದ್ದು, ಭಯೋತ್ಪಾದನೆಯನ್ನು ಹತ್ತಿಕ್ಕಲು ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇದೇ ವೇಳೆ ಸಂವಿಧಾನ ದಿನಾಚರಣೆಯ ಬಗ್ಗೆಯೂ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಮ್ಮ ದೇಶದ ಸಂವಿಧಾನವನ್ನು ನಿಮರ್ಿಸಲು ಅತ್ಯಂತ ಶ್ರೇಷ್ಠ ಕೊಡುಗೆ ನೀಡಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಹೃದಯಪೂರ್ವಕ ನಮನ ಸಲ್ಲಿಸುತ್ತೇವೆ ಎಂದಿದ್ದಾರೆ. ನಮ್ಮ ಸಂವಿಧಾನ ಸಮಾಜದ ಬಡಾ ಹಾಗೂ ದುರ್ಬಲ ವರ್ಗದವರನ್ನು ರಕ್ಷಿಸುತ್ತದೆ, ನಾವು ಹೆಮ್ಮೆಪಡುವ ಅಂತಹ ಶ್ರೇಷ್ಠ ಸಂವಿಧಾನವನ್ನು ರಚಿಸಲು ಸಂವಿಧಾನ ರಚನೆಕಾರರು ಶ್ರಮಿಸಿದ್ದಾರೆ, ಇದೇ ಸಂವಿಧಾನದ ಮಾರ್ಗದರ್ಶನದಲ್ಲಿ ನವ ಭಾರತವನ್ನು ನಿಮರ್ಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಪ್ರಧಾನಿ ದೇಶದ ಜನತೆಗೆ ಕರೆ ನೀಡಿದ್ದಾರೆ. ಇನ್ನು ಡಿ.7 ರಂದು ಆಚರಿಸಲಾಗುವ ಸೇನಾ ಧ್ವಜ ದಿನಾಚರಣೆಯ ಬಗ್ಗೆಯೂ ಮೋದಿ ಮನ್ ಕಿ ಬಾತ್ ನಲ್ಲಿ ಮಾತನಾಡಿದ್ದು ದೇಶದ ಪ್ರತಿಯೊಬ್ಬ ಪ್ರಜೆಯೂ ಯೋಧನ ತ್ಯಾಗ ಬಲಿದಾನಗಳಿಗೆ ನಮನ ಸಲ್ಲಿಸುತ್ತಾನೆ. ಚೋಳ, ಛತ್ರಪತಿ ಶಿವಾಜಿ ಸಾಮ್ರಾಜ್ಯದ ಕಾಲಮಾನದಿಂದಲೂ ನಮ್ಮ ದೇಶದ ನೌಕಾ ಪಡೆ ಶ್ರೇಷ್ಠತೆಯನ್ನು ಹೊಂದಿದೆ ಎಂದಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries