HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಕನ್ನಡ ನಮ್ಮ ಅಸ್ಮಿತೆ, ಕನ್ನಡ ನಮ್ಮ ಅನನ್ಯತೆ, ಕನ್ನಡವೇ ನಮ್ಮ ಆದ್ಯತೆ: ಸಿದ್ದರಾಮಯ್ಯ ಕನ್ನಡ ರಾಜ್ಯೋತ್ಸವ ಸಂಭ್ರಮ: ಕನರ್ಾಟಕ ಜನತೆಗೆ ಶುಭ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಗ್ರಹ ಚಿತ್ರ ಬೆಂಗಳೂರು: 62ನೇ ಕನ್ನಡ ರಾಜ್ಯೋತ್ಸವ ಸಂಭ್ರಮದ ನಿಮಿತ್ತ ಕನರ್ಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನರ್ಾಟಕ ಜನತೆಗೆ ಶುಭ ಕೋರಿದ್ದಾರೆ. ಟ್ವಿಟರ್ ನಲ್ಲಿ ರಾಜ್ಯದ ಜನತೆಯನ್ನು ಉದ್ದೇಶಿಸಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, "ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಹಾದರ್ಿಕ ಶುಭಾಶಯಗಳು. ಕನ್ನಡವೆನ್ನುವುದು ನಮಗೆ ಬದುಕು-ಭಾವ ಮಾತ್ರವೇ ಅಲ್ಲ, ಭವ್ಯ ಭವಿತವ್ಯದ ಹೆದ್ದಾರಿ ಕೂಡ ಎಂದು ಹೇಳಿದ್ದಾರೆ. ಅಂತೆಯೇ "ಕನ್ನಡತನದ ಧೀಮಂತ ಆದರ್ಶವೇ ನಮ್ಮ ಅಭಿವೃದ್ಧಿ ಮಾದರಿಯ ಹಿಂದಿನ ಪ್ರೇರಣೆಯಾಗಿದ್ದು, ಕನ್ನಡತನದ ಕೇಂದ್ರದಲ್ಲಿ ವಿಶ್ವಮಾನವತ್ವವಿದೆ, ಕನ್ನಡ ವಿಶ್ವಮಾನ್ಯವಾಗಿದೆ ಎಂದು ಹೇಳಿದ್ದಾರೆ. ಮತ್ತೊಂದು ಟ್ವೀಟ್ ನಲ್ಲಿ ಕನ್ನಡ ನಮ್ಮ ಅಸ್ಮಿತೆ, ಕನ್ನಡ ನಮ್ಮ ಅನನ್ಯತೆ, ಕನ್ನಡವೇ ನಮ್ಮ ಆದ್ಯತೆ. ಪ್ರೀತಿಯ ಕನ್ನಡಿಗರಿಗೆ 62ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. ಇದೇ ವೇಳೆ ಕನರ್ಾಟಕ ರಾಜ್ಯವು ಪ್ರತ್ಯೇಕ ಧ್ವಜ ಹೊಂದಲು ಇರುವ ಕಾನೂನಾತ್ಮಕ ಅವಕಾಶಗಳನ್ನು ಪರಿಶೀಲಿಸಲು ಸಮಿತಿ ರಚನೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries