HEALTH TIPS

ಯಾವುದೇ ಶೀರ್ಷಿಕೆಯಿಲ್ಲ

ಅಯೋಧ್ಯೆ ವಿವಾದ: ಸಿಬಲ್ ಹೇಳಿಕೆಯನ್ನು ಖಂಡಿಸಿದ ಸುನ್ನಿ ವಕ್ಫ್ ಬೋಡರ್್ ನಡೆ ಅಭಿನಂದನಾರ್ಹ- ಮೋದಿ ಮೆಚ್ಚುಗೆ ಗುಜರಾತ್: 2019 ರ ಚುನಾವಣೆಯ ವರೆಗೂ ಸುಪ್ರೀಂ ಕೋಟರ್್ ಅಯೋಧ್ಯೆ ವಿವಾದದ ತೀರ್ಪನ್ನು ಮುಂದೂಡಬೇಕೆಂಬ ಕಪಿಲ್ ಸಿಬಲ್ ಅವರ ಹೇಳಿಕೆಯನ್ನು ಖಂಡಿಸಿದ್ದ ಸುನ್ನಿ ವಕ್ಫ್ ಬೋಡರ್್ ನಡೆಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಪಿಲ್ ಸಿಬಲ್ ನಿಲುವಿನಿಂದ ಅಂತರವನ್ನು ಕಾಯ್ದುಕೊಂಡ ಸುನ್ನಿ ವಕ್ಫ್ ಬೋಡರ್್ ನ ನಡೆ ಅಭಿನಂದನಾರ್ಹ ಎಂದು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದಾಗ ಹೇಳಿದ್ದಾರೆ. ಹೌದು ಕಪಿಲ್ ಸಿಬಲ್ ನಮ್ಮನ್ನು ಪ್ರತಿನಿಧಿಸುವ ವಕೀಲರು ಆದರೆ ಅವರು ರಾಜಕೀಯ ಪಕ್ಷವನ್ನೂ ಪ್ರತಿನಿಧಿಸುತ್ತಾರೆ. ನೆನ್ನೆ ಅವರು ಸುಪ್ರೀಂ ಕೋಟರ್್ ಗೆ ನೀಡಿರುವ ಹೇಳಿಕೆ ತಪ್ಪು, ನಮಗೆ ಸಮಸ್ಯೆಗೆ ಶೀಘ್ರ ಪರಿಹಾರ ಬೇಕು ಎಂದು ಸುನ್ನಿ ವಕ್ಫ್ ಬೋಟರ್್ ನ ಮುಖ್ಯಸ್ಥ ಹಾಜಿ ಮೆಹಬೂಬ್ ಹೇಳಿದ್ದರು. ಕಪಿಲ್ ಸಿಬಲ್ ಅವರ ಹೇಳಿಕೆಯನ್ನು ಮುಂದಿಟ್ಟುಕೊಂಡು ಬಿಜೆಪಿ ರಾಮ ಮಂದಿರದ ವಿಷಯವಾಗಿ ಕಾಂಗ್ರೆಸ್ ನ ದ್ವಿಮುಖ ನೀತಿಯನ್ನು ಪ್ರಶ್ನಿಸುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries