HEALTH TIPS

ಯಾವುದೇ ಶೀರ್ಷಿಕೆಯಿಲ್ಲ

           ಐಲದಲ್ಲಿ ಕನ್ನಡ ಚಿಂತನೆ 24 ರಂದು
  ಉಪ್ಪಳ: ಕಾಸರಗೋಡಿನ ಅಪೂರ್ವ ಕಲಾವಿದರು ಹಾಗೂ ಬೆಂಗಳೂರಿನ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಜಂಟಿ ಆಶ್ರಯದಲ್ಲಿ ಉಪ್ಪಳ ಸಮೀಪದ ಐಲ ಶ್ರೀಶಾರದಾ ಬೋವಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ.24 ರಂದು ಭಾನುವಾರ ಬೆಳಿಗ್ಗೆ 10ಕ್ಕೆ ಕನ್ನಡ ಚಿಂತನ ಕಾರ್ಯಕ್ರಮ ಆಯೋಜಿಸಲಾಗಿದೆ.
  ಕನ್ನಡ ನಾಡು-ನುಡಿ, ಸಾಹಿತ್ಯ-ಸಾಂಸ್ಕೃತಿಕ ಕಲೆಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾಸರಗೋಡು ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆದುಬರುತ್ತಿರುವ ಸರಣಿ ಕನ್ನಡ ಚಿಂತನ ಕಾರ್ಯಕ್ರಮದ ಭಾಗವಾಗಿ ಸಂಘಟಿಸಲಾಗಿದೆ.
   ಕೇರಳ ತುಳು ಅಕಾಡೆಮಿ ಕಾರ್ಯದಶರ್ಿ ಬಾಲಕೃಷ್ಣ ಶೆಟ್ಟಿಗಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭವನ್ನು ಕೇರಳ ಪಾತರ್ಿಸುಬ್ಬ ಕಲಾಕ್ಷೇತ್ರದ ಅಧ್ಯಕ್ಷ ಜಯರಾಮ ಮಂಜತ್ತಾಯ ಎಡನೀರು ಉದ್ಘಾಟಿಸುವರು. ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ ವಿ. ಕಾಸರಗೋಡಿನ ಭಾಷಾ ಸೌಹಾರ್ಧತೆಯ ಬಗ್ಗೆ ವಿಶೇಷೋಪನ್ಯಾಸ ನೀಡುವರು. ಕನ್ನಡ ಚಿಂತನ ಕಾರ್ಯಕ್ರಮದ ಸಂಯೋಜಕ ಎಸ್.ಜಗನ್ನಾಥ ಶೆಟ್ಟಿ ಕುಂಬಳೆ, ಅಪೂರ್ವ ಕಲಾವಿದರು ಸಂಸ್ಥೆಯ ಅಧ್ಯಕ್ಷ ಎಂ.ಉಮೇಶ ಸಾಲ್ಯಾನ್ ಕಾಸರಗೊಡು ಉಪಸ್ಥಿತರಿರುವರು.
  ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಾಟ್ಯ ವಿದುಷಿಃ ಜಯಶ್ರೀ ಸುವರ್ಣ ಮತ್ತು ಬಳಗದವರಿಂದ ಜಾನಪದ ನೃತ್ಯ ವೈವಿಧ್ಯಗಳು, ಗೀತ ಗಾಯನ, ಮಿಮಿಕ್ರಿ ಮೊದಲಾದ ಕಾರ್ಯಕ್ರಮಗಳು ನಡೆಯಲಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries