HEALTH TIPS

ಯಾವುದೇ ಶೀರ್ಷಿಕೆಯಿಲ್ಲ

           ಅಂಬೇಡ್ಕರರ 62ನೇ ಪರಿನಿವರ್ಾಣ ದಿನ
    ಬದಿಯಡ್ಕ: ಅಂಬೇಡ್ಕರ್ ವಿಚಾರ ವೇದಿಕೆ ಬದಿಯಡ್ಕ ಹಾಗೂ ಮಧೂರು ಶ್ರೀ ಮದರು ಮಹಾಮಾತೆ ಮೊಗೇರ ಸಮಾಜ ಜಿಲ್ಲಾ ಸಮಿತಿಯ ಜಂಟಿ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ, ವಿಶ್ವಮಾನವ ಡಾ.ಬಿ.ಆರ್.ಅಂಬೇಡ್ಕರರ 62ನೇ ಪರಿನಿವರ್ಾಣ ದಿನ ಕಾರ್ಯಕ್ರಮವನ್ನು ಬದಿಯಡ್ಕ ನಿರಂತರ ಕಲಿಕಾ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. 
   ಅಂಬೇಡ್ಕರ್ ವಿಚಾರ ವೇದಿಕೆಯ ಸ್ಥಾಪಕ ಸಮಿತಿ ಸದಸ್ಯ ನಾರಾಯಣ ಬಾರಡ್ಕ ಅಧ್ಯಕ್ಷತೆ ವಹಿಸಿದರು. ಮಧೂರು ಶ್ರೀ ಮದರು ಮಹಾಮಾತೆ ಮೊಗೇರ ಸಮಾಜ ಸಮಿತಿಯ ಅಧ್ಯಕ್ಷ ಆನಂದ ಕೆ. ಮವ್ವಾರು ಅಂಬೇಡ್ಕರ್ರ ಭಾವಚಿತ್ರಕ್ಕೆ ಹಾರಾರ್ಪಣೆಗೈದರು.
  ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕೇರಳ ತುಳು ಅಕಾಡೆಮಿಯ ಸದಸ್ಯ, ಕವಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಮಾತನಾಡಿ ಅಂಬೇಡ್ಕರರ ಚಿಂತನೆ ಸಾರ್ವಕಾಲಿಕವಾದದ್ದು. ಇಂತಹ ಕಾರ್ಯಕ್ರಮಗಳು ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿರದೆ ಸಾರ್ವಜನಿಕ ಕಾರ್ಯಕ್ರಮವಾಗಬೇಕು. ಇದು ಮುಂದಿನ ಜನಾಂಗಕ್ಕೆ ಮಾದರಿಯಾಗಲು ಸಾಧ್ಯ ಎಂದರು. ಬದಿಯಡ್ಕ ಗ್ರಾಮಪಂಚಾಯತು ಸದಸ್ಯ ಶಾಂತ ಬಾರಡ್ಕ, ಮದರು ಮಹಾಮಾತೆ ಮೊಗೇರ ಸಮಾಜ ಸಮಿತಿಯ ಉಪಾಧ್ಯಕ್ಷ ವಸಂತ ಅಜಕ್ಕೋಡು, ಜಿಲ್ಲಾ ಮೊಗೇರ ಸಂಘದ ಗೋಪಾಲ ಡಿ. ಶುಭ ಹಾರೈಸಿದರು. ನಿವೃತ್ತ ಗ್ರಾಮಾಧಿಕಾರಿ ಕೃಷ್ಣ ಧಬರ್ೆತ್ತಡ್ಕ, ಸುರೇಶ ಅಜಕ್ಕೋಡು ಉಪಸ್ಥಿತರಿದ್ದರು. ಅಂಬೇಡ್ಕರ್ ವಿಚಾರ ವೇದಿಕೆಯ ಅಧ್ಯಕ್ಷ ರಾಮ ಪಟ್ಟಾಜೆ ಸ್ವಾಗತಿಸಿ, ಕಾರ್ಯದಶರ್ಿ ಸುಂದರ ಬಾರಡ್ಕ ವಂದಿಸಿದರು.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries