HEALTH TIPS

ಯಾವುದೇ ಶೀರ್ಷಿಕೆಯಿಲ್ಲ

             ಆಧಾರ್ ಆಧಾರಿತ ಸಿಮ್ ಪರಿಶೀಲನೆ ನಿಲ್ಲಿಸಿ: ಭಾರತ್ ಏಟರ್ೆಲ್, ಪೇಮೆಂಟ್ಸ್ ಬ್ಯಾಂಕ್ ಗೆ ಯುಐಡಿಎಐ ಸೂಚನೆ
    ನವದೆಹಲಿ: ಭಾರತಿ ಏಟರ್ೆಲ್ ಮತ್ತು ಪೇಮೆಂಟ್ಸ್ ಬ್ಯಾಂಕ್ ನ ಆಧಾರ್ ಆಧಾರಿತ ಸಿಮಿ ಪರಿಶೀಲನೆಗೆ ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಶನಿವಾರ ತಾತ್ಕಾಲಿಕ ತಡೆ ನೀಡಿದೆ.
   ತನ್ನ ಗ್ರಾಹಕರಿಗೆ ಮಾಹಿತಿ ನೀಡದೆ ಭಾರತಿ ಏಟರ್ೆಲ್ ಪೇಮೆಂಟ್ಸ್ ಬ್ಯಾಂಕ್ ಖಾತೆಗಳನ್ನು ಆರಂಭಿಸುತ್ತಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಯುಐಡಿಎಐ ಈ ಕ್ರಮ ತೆಗೆದುಕೊಂಡಿದ್ದು, ತಕ್ಷಣದಿಂದ ಇಕೆವೈಸಿ ಹಾಗೂ ಪೇಮೆಂಟ್ಸ್ ಬ್ಯಾಂಕ್ ಗ್ರಾಹಕರ ಕೆವೈಸಿ ಪ್ರಕ್ರಿಯೆಯನ್ನು ಸ್ಥಗತಿಗೊಳಿಸುವಂತೆ ಸೂಚಿಸಿದೆ.
    ಯುಐಡಿಎಐ ತನ್ನ ಮಧ್ಯಂತ ಆದೇಶದಲ್ಲಿ ತಕ್ಷದಿಂದ ಜಾರಿಗೆ ಬರುವಂತೆ ಭಾರತಿ ಏಟರ್ೆಲ್ ಲಿಮಿಟೆಡ್ ನ ಇ-ಕೆವೈಸಿ ಪರವಾನಗಿ ಮತ್ತು ಏಟರ್ೆಲ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ ನ ಪರವಾನಗಿಯನ್ನು ಅಮಾನತುಗೊಳಿಸಿದೆ.
ಯುಐಡಿಎಐನ ಈ ಆದೇಶದಿಂದಾಗಿ ಆಧಾರ್ ಅನ್ನು ಮೊಬೈಲ್ ಸಂಖ್ಯೆ ಲಿಂಕ್ ಮಾಡಲು ಮತ್ತು ಎಲೆಕ್ಟ್ರಾನಿಕ್ ಪರಿಶೀಲನೆ ನಡೆಸಲು ಸಾಧ್ಯವಾಗುವುದಿಲ್ಲ. ಅಲ್ಲದೆ ಗ್ರಾಹಕರು ಏಟರ್ೆಲ್ ಪೇಮೆಂಟ್ಸ್ ಬ್ಯಾಂಕ್ ಖಾತೆಯನ್ನು ಆರಂಭಿಸಲು ಸಾಧ್ಯವಾಗುವುದಿಲ್ಲ.
    ಆಧಾರ್ ಕಾಯ್ದೆ ಉಲ್ಲಂಘನೆ ಆರೋಪದ ಕುರಿತು ಭಾತರ್ಿ ಏರ್ಟೆಲ್ ವಿರುದ್ಧ ಪ್ರಾಧಿಕಾರ ಕಳೆದ ತಿಂಗಳು ತನಿಖೆಗೆ ಆದೇಶಿಸಿತ್ತು. ಮೊಬೈಲ್ ಗ್ರಾಹಕರ ಇ-ಕೆವೈಸಿ ಪ್ರಕ್ರಿಯೆಯನ್ನೇ ಬಳಸಿ ಗ್ರಾಹಕರಿಗೆ ಅರಿವಿಲ್ಲದಂತೆ ಅವರ ಹೆಸರಿಗೆ ಪೇಮೆಂಟ್ ಬ್ಯಾಂಕ್ ಖಾತೆಗಳನ್ನು ತೆರೆಯುತ್ತಿರುವ ಬಗ್ಗೆ ದೂರು ನೀಡಲಾಗಿತ್ತು. ತಕ್ಷಣದಿಂದಲೇ ಈ ಅಕ್ರಮ ನಿಲ್ಲಿಸದಿದ್ದರೆ ಭಾರೀ ಪ್ರಮಾಣದ ದಂಡ ತೆರಬೇಕಾದೀತು ಎಂದು ಯುಐಡಿಎಐ ಭಾತರ್ಿ ಏರ್ಟೆಲ್ಗೆ ಎಚ್ಚರಿಕೆ ನೀಡಿತ್ತು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries