HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                     ಸುಪ್ರೀಂ ನ್ಯಾಯಾಧೀಶರ ನಡುವೆ ಸಂಧಾನಕ್ಕೆ 7 ಸದಸ್ಯರ ನಿಯೋಗ ರಚಿಸಿದ ಬಾರ್ ಕೌನ್ಸಿಲ್
    ನವದೆಹಲಿ: ಸುಪ್ರೀಂ ಕೋಟರ್್ ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ಮತ್ತು ಸುಪ್ರೀಂ ಕೋಟರ್್ ನಾಲ್ವರು ಹಿರಿಯ ನ್ಯಾಯಾಧೀಶರ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ(ಬಿಸಿಐ) ಶನಿವಾರ ಏಳು ಸದಸ್ಯರ ನಿಯೋಗವನ್ನು ರಚನೆ ಮಾಡಿದೆ.
    ಸುಪ್ರೀಂ ಕೋಟರ್್ ನ ನಾಲ್ವರು ನ್ಯಾಯಾಧೀಶರು ಮುಖ್ಯ ನ್ಯಾಯಾಧೀಶರ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಇಂದು ಬಾರ್ ಕೌನ್ಸಿಲ್ ಈ ನಿಧರ್ಾರಕ್ಕೆ ಬಂದಿದೆ.
ಬಾರ್ ಕೌನ್ಸಿಲ್ ಸಭೆ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರು, ಸಂಧಾನಕ್ಕಾಗಿ ನಾವು ಏಳು ಸದಸ್ಯರ ನಿಯೋಗವೊಂದನ್ನು ರಚಿಸಿದ್ದು, ಈ ನಿಯೋಗ ಸುಪ್ರೀಂ ಕೋಟರ್್ ನ್ಯಾಯಾಧೀಶರನ್ನು ಮತ್ತು ಮುಖ್ಯ ನ್ಯಾಯಾಧೀಶರನ್ನು ಭೇಟಿ ಮಾಡಲಿದೆ ಎಂದರು ತಿಳಿಸಿದರು.
   ಇದೇ ವೇಳೆ ನ್ಯಾಯಾಧೀಶರ ದಂಗೆಯನ್ನು ರಾಜಕೀಯಗೊಳಿಸುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮನನ್ ಅವರು, ಈ ವಿಷಯದಲ್ಲಿ ರಾಜಕೀಯ ಮಾಡಬೇಡಿ ಎಂದು ನಾನು ಬಾರ್ ಕೌನ್ಸಿಲ್ ಪರವಾಗಿ ರಾಜಕೀಯ ಪಕ್ಷಗಳಿಗೆ ಮನವಿ ಮಾಡುತ್ತೇನೆ ಎಂದರು.
ಸುಪ್ರೀಂ ಕೋಟರ್್ನ ಎರಡನೇ ಅತ್ಯಂತ ಹಿರಿಯ ನ್ಯಾಯಮೂತರ್ಿ ಜೆ. ಚಲಮೇಶ್ವರ್ ಮತ್ತು ನ್ಯಾಯಮೂತರ್ಿಗಳಾದ ರಂಜನ್ ಗೊಗೋಯ್, ಮದನ್ ಬಿ.ಲೋಕೂರ್ ಮತ್ತು ಕುರಿಯನ್ ಜೋಸೆಫ್ ಅವರು ನಿನ್ನೆ ಪತ್ರಿಕಾಗೋಷ್ಠಿ ನಡೆಸಿ, ಸುಪ್ರೀಂ ಕೋಟರ್್ನೊಳಗೆ ಹಲವು ಸಮಸ್ಯೆಗಳಿದ್ದು ಇದು ದೇಶದ ಅತ್ಯುನ್ನತ ನ್ಯಾಯ ಸಂಸ್ಥೆಯನ್ನು ಬಾಧಿಸುವುದರ ಜತೆಗೆ ದೇಶದ ಪ್ರಜಾತಂತ್ರವನ್ನೇ ಅಪಾಯಕ್ಕೆ ಒಡ್ಡಲಿದೆ ಎಂದು ಎಚ್ಚರಿಕೆ ನೀಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries