HEALTH TIPS

ಯಾವುದೇ ಶೀರ್ಷಿಕೆಯಿಲ್ಲ

           ಗಿಳಿವಿಂಡುವಿನಲ್ಲಿ ಭಾರತ ಉತ್ಸವ ಏರ್ಪಡಿಸಲು ಮನವಿ
   ಮಂಜೇಶ್ವರ: ಮಂಜೇಶ್ವರ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಗಿಳಿವಿಂಡುವಿನಲ್ಲಿ ದೇಶದ ವಿವಿಧ ಭಾಷೆ ಸಂಸ್ಕೃತಿಗಳನ್ನು ಪರಿಚಯಿಸುವ ಭಾರತ ಉತ್ಸವ ಕಾರ್ಯಕ್ರಮವನ್ನು ನಡೆಸುವಂತೆ ಸ್ಮಾರಕ ಕೇಂದ್ರದ ಕಾರ್ಯದಶರ್ಿ ಕೆ.ಆರ್ಜಯಾನಂದ ಅವರು ರಾಜ್ಯ ಸಂಸ್ಕೃತಿ ಇಲಾಖೆ ಸಚಿವ ಎ.ಕೆ.ಬಾಲನ್ ಅವರಿಗೆ ಕಾಸರಗೋಡಿನಲ್ಲಿ ಮಂಗಳವಾರ ಮನವಿ ಸಲ್ಲಿಸಿದರು.
  ಗೋವಿಂದ ಪೈ ಸ್ಮಾರಕವು ಲೋಕಾರ್ಪಣೆಗೊಂಡು ಒಂದು ವರ್ಷ ಸಮೀಪಿಸುತ್ತಿದೆ. ಪ್ರತಿ ತಿಂಗಳು ಸ್ಮಾರಕದಲ್ಲಿ ಸಾಂಸ್ಕೃತಿಕ, ಜಾನಪದ ಹಾಗೂ ಸಾಹಿತ್ತಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಸ್ಮಾರಕ ಟ್ರಸ್ಟ್ ಮೇಲುಸ್ತುವಾರಿಯಲ್ಲಿ ನಡೆಯುವ ನಾನಾ ಕಾರ್ಯಕ್ರಮಗಳಂತೆ ವಿವಿಧ ರಾಜ್ಯಗಳ ಸಂಸ್ಕೃತಿ, ಕಲೆಯನ್ನು ಪರಿಚಯಿಸುವ ಭಾರತ ಉತ್ಸವ ಸಾಂಸ್ಕೃತಿಕ ವೈಭವವನ್ನು ಕೇಂದ್ರದಲ್ಲಿ ನಡೆಸಲು ಸರಕಾರ ಹಾಗೂ ಇಲಾಖೆ ಸಹಕರಿಸಬೇಕೆಂದು ಮನವಿಯಲ್ಲಿ ವಿನಂತಿಸಲಾಗಿದೆ.
   

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries